More

    ಸಾಹಿತ್ಯ ಸಮ್ಮೇಳನ ವೇದಿಕೆ ವಿನ್ಯಾಸ ಅಂತಿಮಗೊಳಿಸಿ

    ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮುಖ್ಯವೇದಿಕೆ ಸೇರಿ ವಿವಿಧ ಸ್ಟಾಲ್​ಗಳ ವಿನ್ಯಾಸವನ್ನು ಸೋಮವಾರದೊಳಗಾಗಿ ಅಂತಿಮಗೊಳಿಸಲು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚಿಸಿದರು.

    ಎಂಸಿಎ ತಂಡ ಹಾಗೂ ಅಧಿಕಾರಿಗಳೊಂದಿಗೆ ಗುರುವಾರ ನಗರದಲ್ಲಿ ಸಮ್ಮೇಳನ ಆಯೋಜನೆಗೆ ಉದ್ದೇಶಿಸಿರುವ ಸುವರ್ಣಕಾರರ ಸಂಘದ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಮುಖ್ಯ ವೇದಿಕೆ ನಿರ್ವಣ, ಪುಸ್ತಕ ಮಳಿಗೆಗಳು, ವಸ್ತು ಪ್ರದರ್ಶನ ಮಳಿಗೆಗಳು, ಊಟದ ಪೆಂಡಾಲ್ ನಿರ್ವಣ, ಮಾಧ್ಯಮ ಕೇಂದ್ರ, ಫುಡ್​ಕೋರ್ಟ್, ವಾಹನ ನಿಲುಗಡೆ, ನೋಂದಣಿ ಕೌಂಟರ್, ಸಾರ್ವಜನಿಕ ಓಡಾಟಕ್ಕೆ ರಸ್ತೆ ನಿರ್ವಣ, ರ್ಪಾಂಗ್ ವ್ಯವಸ್ಥೆ, ಸಮಾನಾಂತರ ವೇದಿಕೆಗಳ ನಿರ್ಮಾಣ ಹಾಗೂ ವೇದಿಕೆಗಳ ನೀಲಿ ನಕ್ಷೆಗಳನ್ನು ಅಂತಿಮಗೊಳಿಸಿ ಸೋಮವಾರದೊಳಗಾಗಿ ವರದಿ ಸಲ್ಲಿಸಿ ಎಂದರು.

    ಸಮ್ಮೇಳನ ನಡೆಯುವ ಖಾಲಿ ಜಮೀನಿನ ಸ್ವಚ್ಛತೆ ಮತ್ತು ಸಮತಟ್ಟುಗೊಳಿಸುವ ಕಾರ್ಯ, ತಾತ್ಕಾಲಿಕ ರಸ್ತೆ ನಿರ್ಮಾಣ ಕಾರ್ಯವನ್ನು ತ್ವರಿತವಾಗಿ ಆರಂಭಿಸಿ ಎಂದು ಸೂಚಿಸಿದ ಜಿಲ್ಲಾಧಿಕಾರಿ, ಮುಖ್ಯವೇದಿಕೆ ಹೊರತುಪಡಿಸಿ ಎರಡು ಸಮನಾಂತರ ವೇದಿಕೆ ನಿರ್ಮಾಣ ಅಗತ್ಯವಿದೆ. ಒಂದು ಸಾವಿರದಿಂದ ಒಂದೂವರೆ ಸಾವಿರ ಸಾಮರ್ಥ್ಯದ ಆಸನ ವ್ಯವಸ್ಥೆಯ ಸಮನಾಂತರ ವೇದಿಕೆ ಅವಶ್ಯಕತೆಯಿದ್ದು, ಹಳೆ ಪಿಬಿ ರಸ್ತೆಯಲ್ಲಿರುವ ಸಿದ್ಧರಾಮೇಶ್ವರ ಸಮುದಾಯ ಭವನ, ಅಂಬೇಡ್ಕರ ಭವನ, ಜಿಎಚ್ ಕಾಲೇಜ್ ಕ್ರೀಡಾಂಗಣದಲ್ಲಿ ತಾತ್ಕಾಲಿಕ ವೇದಿಕೆ ನಿರ್ವಿುಸುವ ಇಂಗಿತ ವ್ಯಕ್ತ ಪಡಿಸಿದರು.

    ಸಮ್ಮೇಳನಕ್ಕೆ ಶೀಘ್ರವೇ ದಿನಾಂಕ ನಿಗದಿಯಾಗಬಹುದು. ಸಮ್ಮೇಳನದ ಸಿದ್ಧತೆ ಕೆಲಸಗಳು ಹಿನ್ನಡೆಯಾಗಬಾರದು. ನಿರಂತರವಾಗಿ ಸಿದ್ಧತಾ ಕಾರ್ಯಗಳನ್ನು ಸಮಿತಿಗಳ ಸದಸ್ಯ ಕಾರ್ಯದರ್ಶಿಗಳು ನಡೆಸಬೇಕು ಎಂದರು.

    ಅಪರ ಜಿಲ್ಲಾಧಿಕಾರಿ ಎಸ್. ಯೋಗೇಶ್ವರ, ಎಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ, ಡಿಎಸ್​ಪಿ ವಿಜಯಕುಮಾರ ಸಂತೋಷ, ಕಸಾಪ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ, ತಾಲೂಕಾಧ್ಯಕ್ಷ ಯಲ್ಲಪ್ಪ ಆಲದಕಟ್ಟಿ, ಕಾರ್ಯದರ್ಶಿ ಎಸ್.ಎಸ್. ಬೇವಿನಮರದ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts