ರಾಣೆಬೆನ್ನೂರ: ಕಂತು ಕಟ್ಟಿಲ್ಲವೆಂಬ ಕಾರಣಕ್ಕೆ ಫೈನಾನ್ಸ್ನವರು ಬೈಕ್ ತೆಗೆದುಕೊಂಡು ಹೋದ ಕಾರಣ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹಿರೇಬಿದರಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಪ್ರವಿಣ ರಾಮಪ್ಪ ಕಟ್ಟೆವರ (22) ಮೃತ ಯುವಕ.
ಈತನ ಬೈಕ್ಅನ್ನು ಕಂತು ಕಟ್ಟಿಲ್ಲವೆಂದು ಫೈನಾನ್ಸ್ನವರು ತೆಗೆದುಕೊಂಡು ಹೋಗಿದ್ದರು. ಇದರಿಂದ ಮನನೊಂದ ಪ್ರವಿಣ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
