ತೆರಿಗೆ ಜಾಲದ ವಿಸ್ತರಣೆಯ ಗುರಿ; ನಿರ್ಮಲಾ ಸೀತಾರಾಮನ್ ವಿಶ್ಲೇಷಣೆ

blank

ನವದೆಹಲಿ: ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯಬೇಕಾದರೂ ಜನರ ತೆರಿಗೆ ಹಣದಿಂದಲೇ ಆಗಬೇಕಿದ್ದು, ತೆರಿಗೆ ಜಾಲವನ್ನು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ವಿಸ್ತರಿಸುವುದನ್ನು ಗುರಿಯಾಗಿಸಿಕೊಂಡು ಯೋಜನೆ ರೂಪಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಚುನಾವಣೆಯ ನಂತರ 2024ನೇ ಸಾಲಿನ ಬಜೆಟ್ ಭಾಷಣದ ನಂತರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಮಧ್ಯಮ ವರ್ಗದವರಿಗೆ ಪರಿಹಾರ ಮತ್ತು ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಘೋಷಿಸಲಾಗಿದೆ. ಬಜೆಟ್‌ನಲ್ಲಿ ಮುಂದಿನ ಐದು ವರ್ಷಗಳಲ್ಲಿ ಉದ್ಯೋಗ ಸೃಷ್ಟಿ ಯೋಜನೆಗಳಿಗೆ 2 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದರು.

ಎಲ್ಲಾ ಸ್ಟಾರ್ಟಪ್ ಹೂಡಿಕೆದಾರರಿಗೆ ’ಏಂಜೆಲ್ ಟ್ಯಾಕ್ಸ್’ ರದ್ದುಗೊಳಿಸುವುದು, ಮೊಬೈಲ್ ಫೋನ್‌ಗಳು ಮತ್ತು ಚಿನ್ನದ ಮೇಲಿನ ಕಸ್ಟಮ್ಸ್ ಸುಂಕವನ್ನು ಕಡಿತಗೊಳಿಸುವುದು ಹಾಗೂ ಬಂಡವಾಳದ ಮೇಲಿನ ಲಾಭದ ತೆರಿಗೆಯನ್ನು ಸರಳಗೊಳಿಸುವುದು ಸೇರಿದಂತೆ ತೆರಿಗೆ ಸುಧಾರಣೆಗಳನ್ನು ಹೊಸದಾಗಿ ಪರಿಚಯಿಸಲಾಗಿದೆ. ಇದರ ಹೊರತಾಗಿಯೂ ಸೆಕ್ಯುರಿಟೀಸ್ ವಹಿವಾಟು ತೆರಿಗೆ (ಎಸ್‌ಟಿಟಿ) ಯನ್ನು ಹೆಚ್ಚಳ ಮಾಡುವ ಭವಿಷ್ಯದ ಆಯ್ಕೆಗಳ ಲೆಕ್ಕಾಚಾರದ ಮೇಲೆ ಷೇರು ಮಾರುಕಟ್ಟೆಗಳಲ್ಲಿ ಕುಸಿತ ಕಂಡು ಬಂದಿದೆ ಎಂದು ಬಜೆಟ್ ಬೆಳವಣಿಗೆಗಳನ್ನು ವಿಶ್ಲೇಷಿಸಿದರು.

Share This Article

ಮನೆಯಲ್ಲೇ ಗಟ್ಟಿ ಮೊಸರು ಮಾಡುವ ವಿಧಾನ ನಿಮಗೆ ತಿಳಿದಿದೆಯೇ; ಇಲ್ಲಿದೆ ಸಿಂಪಲ್ ಟ್ರಿ​ಕ್ಸ್​​​​​ | Health Tips

ಚಳಿಗಾಲವಿರಲಿ, ಬೇಸಿಗೆಯಿರಲಿ ಮೊಸರನ್ನು ಇಷ್ಟಪಡುವವರು ಹವಾಮಾನ ಬದಲಾದಾಗಲೂ ಅದನ್ನು ತಿನ್ನುವುದನ್ನು ನಿಲ್ಲಿಸುವುದಿಲ್ಲ. ಚಳಿ ಹೆಚ್ಚಾದಾಗಲೂ ಅನೇಕರು…

ಊಟದ ಸಮಯದಲ್ಲಿ ಈ ತಪ್ಪುಗಳನ್ನು ಮಾಡಲೇಬೇಡಿ; ಮಾಹಿತಿ ತಿಳಿದು ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುವುದನ್ನು ತಪ್ಪಿಸಿ | Health Tips

ಮಧುಮೇಹವು ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ವೇಗವಾಗಿ ಹರಡುತ್ತಿದೆ. WHO ಕೂಡ ಈ ಬಗ್ಗೆ ಕಳವಳ ವ್ಯಕ್ತಪಡಿಸಿದೆ.…

ಈ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಕುಕ್ಕರ್‌ನಲ್ಲಿ ಬೇಯಿಸಬೇಡಿ, ವಿಷಕಾರಿಯಾಗಬಹುದು ಎಚ್ಚರ! Pressure Cooker

Pressure Cooker : ಪ್ರೆಶರ್​ ಕುಕ್ಕರ್ ಇಂದು ಪ್ರತಿ ಮನೆಗಳಲ್ಲೂ ಅಗತ್ಯವಿರುವ ಅಡುಗೆ ಸಲಕರಣೆಗಳಲ್ಲಿ ಒಂದಾಗಿದೆ.…