ಬೆಂಗಳೂರು: ಬೆಸ್ಕಾಮ್ಗೆ ನಕಲಿ ಅಂಕಪಟ್ಟಿ ಸಲ್ಲಿಸಿ ವಂಚನೆ ಮಾಡಿದ್ದ ನಾಲ್ವರು ಲೈನ್ಮ್ಯಾನ್ಗಳಿಗೆ ಎಫ್ಐಆರ್ ಮೂಲಕ ಶಾಕ್ ತಗುಲಿದೆ. ಅರ್ಥಾತ್, ಬೆಸ್ಕಾಮ್ಗೆ ನಕಲಿ ಅಂಕಪಟ್ಟಿ ಸಲ್ಲಿಸಿ ಲೈನ್ಮ್ಯಾನ್ ಹುದ್ದೆ ಗಿಟ್ಟಿಸಿಕೊಂಡಿದ್ದ ನಾಲ್ವರ ವಿರುದ್ಧ ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬೆಸ್ಕಾಮ್ನ ಎಚ್ಎಸ್ಆರ್ ಲೇಔಟ್ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಎನ್.ಎಲ್. ಜ್ಯೋತಿ ಪ್ರಕಾಶ್ ಅವರು, ಈ ಕುರಿತು ದೂರು ನೀಡಿದ್ದರು. ಆ ದೂರಿನ ಮೇರೆಗೆ ಲೈನ್ಮ್ಯಾನ್ಗಳಾದ ಆನಂದ ಖುಡೆ, ಎನ್. ಸುಬ್ರಮಣಿ, ಡಿ.ಸಿ. ಚಂದ್ರಶೇಖರ ಮತ್ತು ಶ್ರೀಕಾಂತ ಬಡಿಗೇರ ಎಂಬುವರ ವಿರುದ್ಧ ಎಫ್ಐಆರ್ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸಹಾಯಕ ಲೈನ್ಮ್ಯಾನ್ ಹುದ್ದೆಗೆ ನೇಮಕಾತಿ ವೇಳೆ ಈ ನಾಲ್ವರು ಆರೋಪಿಗಳು ನಕಲಿ ಅಂಕಪಟ್ಟಿ ಸಲ್ಲಿಸಿ ಬೆಸ್ಕಾಮ್ಗೆ ನಂಬಿಸಿ ವಂಚನೆ ಮಾಡಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ತೆಗೆದು ಕೊಳ್ಳಬೇಕೆಂದು ದೂರುದಾರರು ಮನವಿ ಮಾಡಿದ್ದರು.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್ಬುಕ್ ಪೇಜ್ ಲೈಕ್ ಮಾಡಿ
ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ್ದವನಿಗೆ 10 ವರ್ಷ ಜೈಲು; ಒಬ್ಬನ ಮೇಲೆಯೇ 21 ಪೋಕ್ಸೋ ಪ್ರಕರಣಗಳು
‘ಕಾಲೂರಲು’ ಸಿಗದ ‘ಬೆಂ’ಬಲ; ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ರಾಜಕೀಯ ನಿವೃತ್ತಿ?