ಚಿಕ್ಕಮಗಳೂರು: ಚಿನ್ನದ ವ್ಯಾಪಾರಿಯೊಬ್ಬರಿಂದ 5 ಲಕ್ಷ ರೂ. ವಸೂಲಿ ಮಾಡಿದ್ದ ಆರೋಪದ ಮೇರೆಗೆ ಇನ್ಸ್ಪೆಕ್ಟರ್ ಸೇರಿ ನಾಲ್ವರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ಅಜ್ಜಂಪುರ ಪೊಲೀಸ್ ಇನ್ಸ್ಪೆಕ್ಟರ್ ನಿಂಗರಾಜು ಹಾಗೂ ಮೂವರು ಕಾನ್ಸ್ಟೆಬಲ್ ವಿರುದ್ದ ಎಫ್ಐಆರ್ ದಾಖಲಾಗಿದೆ. ದಾವಣಗೆರೆ ಮೂಲದ ಚಿನ್ನದ ವ್ಯಾಪಾರಿ ಭಗವಾನ್ ಎಂಬವರನ್ನು ಮೇ 11ರಂದು ತಡೆದು ಹಣ ವಸೂಲಿ ಮಾಡಿದ ಆರೋಪ ಈ ನಾಲ್ವರ ವಿರುದ್ಧವಿದೆ. ಭಗವಾನ್ ದಾವಣಗೆರೆಯಿಂದ ಹಾಸನ ಜಿಲ್ಲೆಯ ಬೇಲೂರಿಗೆ ಚಿನ್ನ ತೆಗೆದುಕೊಂಡು ಹೋಗುವಾಗ ಈ ಘಟನೆ ನಡೆದಿತ್ತು.
ಭಗವಾನ್ 2.45 ಕೆ.ಜಿ. ಚಿನ್ನವನ್ನು ತನ್ನ ಕಾರಿನಲ್ಲಿ ಕೊಂಡೊಯ್ಯುತ್ತಿದ್ದಾಗ ಅಡ್ಡಗಟ್ಟಿದ್ದ ಪೊಲೀಸರು ಅದನ್ನು ಕಳ್ಳಮಾಲು ಎಂದು ಬೆದರಿಸಿ 10 ಲಕ್ಷ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದರು. ಕೊನೆಗೆ ಪಿಐ ನಿಂಗರಾಜು 5 ಲಕ್ಷ ರೂಪಾಯಿಗೆ ಸೆಟ್ಲ್ ಮಾಡಿದ್ದರು. ಈ ಸಂಬಂಧ ಜು. 21ರಂದು ಚಿಕ್ಕಮಗಳೂರು ಎಸ್ಪಿಗೆ ಭಗವಾನ್ ದೂರು ನೀಡಿದ್ದರು.
ಭಗವಾನ್ ದೂರಿನ ಮೇರೆಗೆ ತನಿಖೆ ನಡೆಸುವಂತೆ ಆಗಿನ ಎಸ್ಪಿ ಅಕ್ಷಯ್ ಆದೇಶ ಮಾಡಿದ್ದರು. ಅದರಂತೆ ತನಿಖೆ ನಡೆದು ವರದಿ ಬಂದಿದ್ದು, ಇದೇ 17ರಂದು ಅಜ್ಜಂಪುರ ಠಾಣೆಯಲ್ಲಿ ದರೋಡೆ ಪ್ರಕರಣ ಎಂದು ಈ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಆಸ್ಟ್ರೇಲಿಯನ್ ಸಿನಿಮಾಗೆ ಕನ್ನಡಿಗನ ಸಂಗೀತ; ಮೊದಲ ಪ್ರಯತ್ನದಲ್ಲೇ ಶ್ರೇಷ್ಠ ಸಂಗೀತ ಪ್ರಶಸ್ತಿ
ಬ್ರೂಸ್ ಲೀ ಸತ್ತ 49 ವರ್ಷಗಳ ಬಳಿಕ ಬಯಲಾಯ್ತು ಸಾವಿನ ರಹಸ್ಯ!; ಸಮರಕಲೆ ಪ್ರವೀಣ ಸತ್ತಿದ್ದು ಹೇಗೆ?