ತುಮಕೂರು: ಕಳೆದ ತಿಂಗಳ 28ನೇ ತಾರೀಕಿನಂದುವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರಿಂದ. ತುಮಕೂರು ನಗರದಲ್ಲಿ ಶೌರ್ಯ ಸಂಚಲನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಂದು ಆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶರಣ ಪಂಪವೆಲ್ ಆಗಮಿಸಿದ್ದರು. ಸಾರ್ವಜನಿಕ ವೇದಿಕೆಯಲ್ಲಿ ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ್ದರು ಎನ್ನುವ ಆರೋಪದ ಮೇಲೆ ಈಗ ಅವರ ವಿರುದ್ಧ ಎಫ್ಆರ್ ದಾಖಲಿಸಲಾಗಿದೆ.
ಇದೀಗ ವಿಶ್ವ ಹಿಂದೂ ಪರಿಷತ್ ಪ್ರಾಂತ್ಯ ಕಾರ್ಯದರ್ಶಿಯಾಗಿರುವ ಶರಣ ಪಂಪವೆಲ್ ವಿರುದ್ಧ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಸೈಯದ್ ಬುರ್ಹಾನ್ ಉದ್ದೀನ್ ಎಂಬುವವರು ಪ್ರಕರಣ ದಾಖಲಿಸಿದ್ದಾರೆ.
ಶರಣ್ ಪಂಪ್ವೆಲ್ ತಮ್ಮ ಭಾಷಣದ ಸಂದರ್ಭದಲ್ಲಿ ತುಮಕೂರು ಜಿಲ್ಲೆಯನ್ನು ಹಿಂದುತ್ವದ ಫ್ಯಾಕ್ಟರಿ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದರು. ಇದು ಪ್ರಚೋದನಾಕಾರಿ ಹೇಳಿಕೆ ಎಂದು ಆರೋಪಿಸಿರುವ ಸೈಯದ್ ಬುರ್ಹಾನ್ ಉದ್ದೀನ್, ಪ್ರಕರಣ ದಾಖಲಿಸಿದ್ದಾರೆ. ತಮ್ಮ ಭಾಷಣದಲ್ಲಿ ಶರಣ್ ಪಂಪ್ವೆಲ್, ಗುಜರಾತ್ ಹತ್ಯಾಕಾಂಡವನ್ನ ಹಿಂದೂ ಪರಾಕ್ರಮ ಎಂದು ಹಾಡಿ ಹೊಗಳಿದ್ದರು.
ಪಂಪವೇಲ್ ಭಾಷಣದಿಂದ ತುಮಕೂರಿನಲ್ಲಿ ಶಾಂತಿಭಂಗ ಆಗುತ್ತಿದೆ ಎಂದು ಆರೋಪಿಸಿರುವ ಸೈಯದ್ ಬುರ್ಹಾನ್ ಉದ್ದೀನ್ ದೂರು ನೀಡಿದ್ದು, ಕಲಂ 157, ಸಿಆರ್ಪಿಸಿ (a)(b) ಅಡಿಯಲ್ಲಿ ಪ್ರಕರಣ ದಾಖಸಲಾಗಿದೆ. ಇದೀಗ ತಿಲಕ್ ಪಾರ್ಕ್ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.