More

    ಪೊಲೀಸ್ ಠಾಣೆ ಮೆಟ್ಟಿಲೇರಿದ ದಂಪತಿ ಸರಸ ಸಲ್ಲಾಪ; ನ್ಯಾಯ ಕೊಡಿಸುವಂತೆ ದೂರು

    ಬೆಂಗಳೂರು: ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ನೀರು, ಪಾರ್ಕಿಂಗ್​ ಹಾಗೂ ಕಸ ಹಾಕುವ ವಿಚಾರಕ್ಕೆ ಅಕ್ಕಪಕ್ಕದ ಮನೆಯವರ ಜೊತೆ ಜಗಳ ಆಡುವುದನ್ನು ನೋಡಿದ್ದೇವೆ ಹಾಗೂ ಕೇಳಿದ್ದೇವೆ. ಕೆಲವೊಮ್ಮೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಪೊಲೀಸ್​ ಠಾಣೆ ಮೆಟ್ಟಿಲೇರಿರುವುದನ್ನು ಸಹ ನಾವು ನೋಡಿದ್ದೇವೆ. ಆದರೆ ಇಲ್ಲೊಬ್ಬ ಮಹಿಳೆ ಪಕ್ಕದ ಮನೆಯ ದಂಪತಿಯ ಸರಸ ಸಲ್ಲಾಪದಿಂದ ಭಾರಿ ಕಿರಿಕಿರಿ ಉಂಟಾಗುತ್ತಿದೆ ಎಂದು ಆರೋಪಿಸಿ ಪೊಲೀಸ್​ ಠಾಣೆ ಮೆಟ್ಟಿಲೇರಿರುವ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ.

    ತಮ್ಮ ಬೆಡ್‌ರೂಂ ಕಿಟಕಿ ಹಾಕದೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ದಂಪತಿಯ ವಿರುದ್ಧ ಪಕ್ಕದ ಮನೆಯ ಮಹಿಳೆಯೊಬ್ಬರು ಗಿರಿನಗರ ಪೊಲೀಸರಿಗೆ ದೂರು ನೀಡಿದ್ದಾರೆ. ದಂಪತಿ ತಮ್ಮ ಕೋಣೆಯ ಕಿಟಕಿ ತೆರೆದಿಟ್ಟು ಲೈಂಗಿಕ ಕ್ರಿಯೆಯಲ್ಲಿ ತೊಡಗುತ್ತಾರೆ ಮತ್ತು ವಿಕೃತವಾಗಿ ವರ್ತಿಸುತ್ತಾರೆ ಎಂದು ದಾಖಲಾಗಿರುವ ದೂರಿನಲ್ಲಿ ಆರೋಪಿಸಲಾಗಿದೆ.

    ಇದನ್ನೂ ಓದಿ: ತುರ್ತು ಮೆದುಳು ಶಸ್ತ್ರಚಿಕಿತ್ಸೆ; ಸದ್ಗುರು ಆರೋಗ್ಯದ ಬಗ್ಗೆ ವೈದ್ಯರು ಹೇಳುವುದೇನು?

    ಕಿಟಕಿಯ ಬಾಗಿಲು ಹಾಕಿಕೊಂಡು ಸರಸ ಸಲ್ಲಾಪ ನಡೆಸಿ ಎಂದು ಹೇಳಿದರೆ, ನಮ್ಮ ಮನೆ, ನಮ್ಮ ಇಷ್ಟ ಎಂಬ ಉತ್ತರ ದಂಪತಿಯಿಂದ ಬಂದಿದೆ. ಆಕ್ಷೇಪಿಸಿದಾಗ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದಲ್ಲದೆ ಹಿಳೆಯನ್ನು ಅತ್ಯಾಚಾರ, ಕೊಲೆ ಮಾಡುವ ಬೆದರಿಕೆ ಕೂಡ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ಇನ್ನು ಆರೋಪಿಗೆ ಮನೆ ಮಾಲೀಕ ಮತ್ತು ಆತನ ಮಗ ಕೂಡ ಸಾಥ್ ನೀಡಿದ್ದು, ಹುಡುಗರನ್ನು ಕರೆಸಿ ಮನೆ ಮಾಲೀಕನಿಂದ ಮಹಿಳೆಗೆ ಬೆದರಿಕೆ ಹಾಕಿದ್ದಾರಂತೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಮಹಿಳೆ ಪೊಲೀಸರಿಗೆ  ದೂರು ನೀಡಿದ್ದಾರೆ. ಮನೆ ಮಾಲೀಕ ಚಿಕ್ಕಣ್ಣ, ಆತನ ಪುತ್ರ ಮಂಜುನಾಥ್, ಪಕ್ಕದ ಮನೆ ವ್ಯಕ್ತಿ ವಿರುದ್ದ ದೂರು ದಾಖಲು ಮಾಡಲಾಗಿದ್ದು, ದೂರು ಸ್ವೀಕರಿಸಿದ ಪೊಲೀಸರು IPC ಸೆಕ್ಷನ್ 504, 506, 509, 34ರಡಿ   FIR ದಾಖಲು ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts