ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಹೃದಯವಿದ್ರಾವಕ ಘಟನೆ: ಬೆಂಕಿ ಅವಘಡದಲ್ಲಿ ಕರುಳಕುಡಿಯ ಜೀವ ಉಳಿಸಿ ಪ್ರಾಣಬಿಟ್ಟ ಉದ್ಯಮಿ!

ಶಿವಮೊಗ್ಗ: ಮನೆಯಲ್ಲಿ ವಿದ್ಯುತ್ ಶಾರ್ಟ್​ಸರ್ಕಿಟ್​ನಿಂದ ಉಂಟಾದ ಅಗ್ನಿಅವಘಡದಲ್ಲಿ ಕರುಳಕುಡಿಯನ್ನು ರಕ್ಷಿಸಿ ಉದ್ಯಮಿಯೊಬ್ಬರು ಜೀವತೆತ್ತ ಹೃದಯವಿದ್ರಾವಕ ಘಟನೆ ಭಾನುವಾರ ಬೆಳಗಿನಜಾವ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ನಡೆದಿದೆ. ಉದ್ಯಮಿ ಶರತ್ ಭೂಪಾಳಂ(39) ಮೃತ ದುರ್ದೈವಿ. ಜಿಲ್ಲಾ ಪಂಚಾಯಿತಿ ಕಾರ್ಯಾಲಯದ ಎದುರು ಇರುವ ಬಂಗಲೆಯಲ್ಲಿ ಎಸಿ(ಹವಾನಿಯಂತ್ರಿತ)ಗೆ ಅಳವಡಿಸಿದ್ದ ಸ್ಟಪ್ಲೇಜರ್ ಸ್ಫೋಟಗೊಂಡು ಭಾನುವಾರ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಮಾತ್ರದಲ್ಲಿ ದಟ್ಟಹೊಗೆ ಮನೆಯಲ್ಲಿ ಆವರಿಸಿದೆ. ಶರತ್ ಅವರು ತಮ್ಮ ಕೋಣೆಯಿಂದ ಮಗ ಸಂಚಿತ್‌ನನ್ನು ರಕ್ಷಣೆ ಮಾಡಿದ್ದಾರೆ. ಈ ಸಂದರ್ಭ ದೇಹ … Continue reading ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಹೃದಯವಿದ್ರಾವಕ ಘಟನೆ: ಬೆಂಕಿ ಅವಘಡದಲ್ಲಿ ಕರುಳಕುಡಿಯ ಜೀವ ಉಳಿಸಿ ಪ್ರಾಣಬಿಟ್ಟ ಉದ್ಯಮಿ!