ತೆಲಂಗಾಣ: ಟಾಲಿವುಡ್ನ ಜನಪ್ರಿಯ ನಟ ಜ್ಯೂ.ಎನ್ಟಿಆರ್ ಸಹೋದರ ನಂದಮೂರಿ ಕಲ್ಯಾಣ್ ರಾಮ್ ನಟಿಸುತ್ತಿದ್ದ ಸಿನಿಮಾದ ಶೂಟಿಂಗ್ ಸೆಟ್ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು ಸುಮಾರು 4 ಕೋಟಿ ರೂ. ನಷ್ಟವಾಗಿದೆ. ಬೆಂಕಿ ಅವಘಡದಲ್ಲಿ ಯಾರಿಗೂ ಯಾವುದೇ ಗಾಯ ಅಥವಾ ಜೀವಹಾನಿ ಸಂಭವಿಸಿಲ್ಲ ಎಂದು ಚಿತ್ರತಂಡ ತಿಳಿಸಿದೆ.
ಇದನ್ನೂ ಓದಿ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಕೇಸ್ ದಾಖಲಿಸಿದ ಎಸ್ಐಟಿ!
ಶಾರ್ಟ್ ಸರ್ಕ್ಯೂಟ್ನಿಂದಾಗಿ ಈ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗುತ್ತಿದ್ದು, ಸೆಟ್ಗೆ ಬೆಂಕಿ ಬಿದ್ದಾಗ ಶೂಟಿಂಗ್ ನಡೆಯುತ್ತಿರಲಿಲ್ಲ ವಾದ್ದರಿಂದ ಯಾವುದೇ ಹಾನಿಯಾಗಿಲ್ಲ.
ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಕಲ್ಯಾಣ್ ರಾಮ್ ಕ್ರೈಂ ಥ್ರಿಲ್ಲರ್ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಕಲ್ಯಾಣ್ ರಾಮ್ ಸಿಬಿಐ ಅಧಿಕಾರಿಯಾಗಿ ಕಾಣಿಸಿಕೊಳ್ತಿದ್ದಾರೆ. ಜೊತೆಗೆ ಬಾಲಿವುಡ್ನ ಅರ್ಜುನ್ ರಾಮ್ಪಾಲ್, ನಾಯಕಿಯಾಗಿ ಸಾಯಿ ಮಂಜ್ರೇಕರ್, ಸಿನಿಮಾದಲ್ಲಿ ಹಿರಿಯ ನಟಿ, ರಾಜಕಾರಣಿ ವಿಜಯಶಾಂತಿ ವಿಜಯಶಾಂತಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಈ ಚಿತ್ರವನ್ನು ಪ್ರದೀಪ್ ಚಿಲಕೂರಿ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾಕ್ಕೆ ಅಶೋಕ್ ಬಂಡವಾಳ ಹೂಡಿದ್ದಾರೆ. ಕಲ್ಯಾಣ್ ರಾಮ್ ನಟನೆ ಜೊತೆಗೆ ಸಹ ನಿರ್ಮಾಪಕರೂ ಆಗಿದ್ದಾರೆ.
ಈ ಸಿನಿಮಾದ ಆಕ್ಷನ್ ದೃಶ್ಯಗಳ ಚಿತ್ರೀಕರಣಕ್ಕಾಗಿ ಹೈದರಾಬಾದ್ ಹೊರವಲಯದಲ್ಲಿ ಒಂದೇ ಜಾಗದಲ್ಲಿ ಬೇರೆ ಬೇರೆ ಸೆಟ್ಗಳನ್ನು ನಿರ್ಮಾಣ ಮಾಡಲಾಗಿತ್ತು. ಸೆಟ್ ನಿರ್ಮಾಣಕ್ಕೆ ಸುಮಾರು 4 ಕೋಟಿ ಖರ್ಚು ಮಾಡಲಾಗಿತ್ತು ಎನ್ನಲಾಗುತ್ತಿದೆ. ಈಗ ಆ ಬೃಹತ್ ಸೆಟ್ ಬೆಂಕಿಗೆ ಆಹುತಿಯಾಗಿದೆ. ಸೆಟ್ಗೆ ಬೆಂಕಿ ಬಿದ್ದಾಗ ಚಿತ್ರೀಕರಣ ನಡೆಯುತ್ತಿರಲಿಲ್ಲವಾದ್ದರಿಂದ ಯಾರಿಗೂ ಹಾನಿಯಾಗಿಲ್ಲ.
ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ: ರಾಜ್ಯದಲ್ಲಿ ಇನ್ನೂ 5 ದಿನ ಮಳೆಯಾಗುವ ಸಾಧ್ಯತೆ!