ಕೊಪ್ಪಳ: ಕುಷ್ಟಗಿ ತಾಲೂಕಿನ ವಣಗೇರಿ ಟೋಲ್ ಗೇಟ್ನಲ್ಲಿ ಸೋಮವಾರ ಲಾರಿಯೊಂದಕ್ಕೆ ಬೆಂಕಿಬಿದ್ದು ಹೊತ್ತಿಉರಿದಿದೆ.
ಕೊಪ್ಪಳ ತಾಲೂಕು ಗಿಣಗೇರದಿಂದ ಮಹಾರಾಷ್ಟ್ರದ ಸಾಂಗ್ಲಿಗೆ ಲಾರಿಯಲ್ಲಿ ಸಿಮೆಂಟ್ ತುಂಬಿಕೊಂಡು ಹೋಗಲಾಗುತ್ತಿತ್ತು. ಟೋಲ್ಗೇಟ್ನಲ್ಲಿ ನಿಲ್ಲುತ್ತಿದ್ದಂತೆ ಲಾರಿಗೆ ಬೆಂಕಿಯ ಕೆನ್ನಾಲಗೆ ವ್ಯಾಪಿಸಿ ಸಂಪೂರ್ಣ ಸುಟ್ಟುಕರಕಲಾಗಿದೆ. ಈ ದೃಶ್ಯ ಕಂಡ ಇತರ ವಾಹನ ಸವಾರರು ಮತ್ತು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಟೋಲ್ ಗೇಟ್ನಲ್ಲಿದ್ದ ಹಣ ಸಂಗ್ರಹಿಸುವ ಕ್ಯಾಬಿನ್ ಕೂಡ ಬೆಂಕಿಗೆ ಆಹುತಿಯಾಗಿದೆ. ಸಿಸಿ ಕ್ಯಾಮರಾ ಕೂಡ ಸುಟ್ಟುಕರಕಲಾಗಿದೆ. ಬೆಂಕಿ ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ಕುಷ್ಟಗಿ ಅಗ್ನಿಶಾಮಕ ಠಾಣೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ಅಷ್ಟರಲ್ಲಿ ಲಾರಿ ಸಂಪೂರ್ಣ ಹಾನಿಯಾಗಿತ್ತು.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಲಾರಿ ಚಾಲಕ ಮತ್ತು ಕ್ಲೀನರ್ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ. ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೇನು ನಿಶ್ಚಿತಾರ್ಥ ನಡೆಯಬೇಕು… ಅಷ್ಟರಲ್ಲಿ ಬಂದ ಜವರಾಯ ಅಕ್ಕ-ತಂಗಿಯ ಪ್ರಾಣ ಹೊತ್ತೊಯ್ದ!
ವಾಟ್ಸ್ಆ್ಯಪ್ ವಿಡಿಯೋ ಕರೆ ಮಾಡಿದ್ದ ಯುವತಿ ಬೆತ್ತಲಾಗಿ ನಿಂತಿದ್ದಳು! ಮುಂದೆ ಆಗಿದ್ದೆಲ್ಲವೂ ಅವಾಂತರ