ವಿಜಯನಗರ: ರಾಜ್ಯದ ನೂತನ ಜಿಲ್ಲೆಗೆ ಜಿಲ್ಲಾಧಿಕಾರಿಯ ನೇಮಕವಾಗಿದ್ದು, ಆ ಮೂಲಕ ಅನಿರುದ್ಧ್ ಶ್ರವಣ್ ಹೊಸ ಜಿಲ್ಲೆಯ ಪ್ರಪ್ರಥಮ ಜಿಲ್ಲಾಧಿಕಾರಿ ಎನಿಸಿಕೊಂಡಿದ್ದಾರೆ.
ಕರ್ನಾಟಕದ 31ನೇ ಜಿಲ್ಲೆಯಾಗಿ ರೂಪುಗೊಂಡಿರುವ ವಿಜಯನಗರ ಜಿಲ್ಲೆಗೆ ಸರ್ಕಾರ ಜಿಲ್ಲಾಧಿಕಾರಿಯನ್ನು ನೇಮಿಸಿದೆ. ಈ ಹಿಂದೆ ವಿಜಯನಗರ ಜಿಲ್ಲೆ ರಚನೆಯ ವಿಶೇಷಾಧಿಕಾರಿಗಳಾಗಿದ್ದ ಅನಿರುದ್ಧ್ ಶ್ರವಣ್, ಇದೀಗ ಅದರ ಪ್ರಪ್ರಥಮ ಜಿಲ್ಲಾಧಿಕಾರಿ ಅನಿಸಿಕೊಂಡಿದ್ದಾರೆ.
ಇವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತರಾಗಿದ್ದರು. ಈಗ ಅವರನ್ನು ವಿಜಯನಗರ ಜಿಲ್ಲಾಧಿಕಾರಿಯಾಗಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಆದೇಶ ಹೊರಡಿಸಿದ್ದಾರೆ.
ಸಮನ್ಸ್ ನೀಡಲು ಬಂದಿದ್ದ ಪೊಲೀಸ್, ಅತ್ಯಾಚಾರ ಮಾಡಿದ, ಗರ್ಭಪಾತವನ್ನೂ ಮಾಡಿಸಿದ; ವಿಡಿಯೋ ವೈರಲ್…