ಕುಸಿದು ಬಿದ್ದು ಮೀನುಗಾರ ಮೃತ್ಯು

blank

ಗಂಗೊಳ್ಳಿ: ಮರವಂತೆ ಬಂದರಿನ ಸಮೀಪ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ದೋಣಿಯಲ್ಲಿ ಕುಸಿದು ಬಿದ್ದು ನಾವುಂದ ಗ್ರಾಮದ ಮೀನುಗಾರ ಚಂದ್ರ(43) ಸಾವನ್ನಪ್ಪಿದ್ದಾರೆ.

ಚಂದ್ರ ಅವರು ಮಂಗಳವಾರ ಮರವಂತೆ ಬಂದರಿನಿಂದ ಗಂಗಾದೇವತೆ ದೋಣಿಯಲ್ಲಿ ಸಂಗಡಿಗರೊಂದಿಗೆ ಮೀನುಗಾರಿಕೆಗೆ ತೆರಳಿದ್ದು ಅರ್ಧ ಗಂಟೆ ನಂತರ ಗಾಳಿ ಮಳೆ ಬೀಸಿದ ಪರಿಣಾಮ ಚಂದ್ರ ಕುಸಿದು ದೋಣಿಯಲ್ಲಿ ಬಿದ್ದಿದ್ದು ಕೂಡಲೇ ದೋಣಿಯಲ್ಲಿದ್ದವರು ವಿಚಾರಿಸಿದಾಗ ಎದೆ ನೋವು ಎಂದು ಹೇಳಿ ಮೂರ್ಛೆ ಹೋಗಿದ್ದರು. ಕೂಡಲೇ ಅವರನ್ನು ದೋಣಿಯಲ್ಲಿ ದಡಕ್ಕೆ ತಂದು ಚಿಕಿತ್ಸೆಗೆ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಅವರು ಮೃತಪಟ್ಟಿದ್ದಾರೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

ಸಂಜೆ ಉಪ್ಪನ್ನು ದಾನ ಮಾಡುವುದು ಒಳ್ಳೆಯದಲ್ಲ! ಮನೆಯಲ್ಲಿ ಎದುರಾಗುತ್ತದೆ ಹಣದ ಸಮಸ್ಯೆ..salt

salt : ಉಪ್ಪು ಅಡುಗೆಯಲ್ಲಿ ಕೇವಲ ರುಚಿ ಹೆಚ್ಚಿಸುವ ವಸ್ತುವಲ್ಲ. ವಾಸ್ತು ಶಾಸ್ತ್ರದ ಪ್ರಕಾರ, ಇದು ಮನೆಯಲ್ಲಿ…

ನವವಿವಾಹಿತರಿಗೆ ಈ ಉಡುಗೊರೆಗಳನ್ನು ಎಂದಿಗೂ ನೀಡಬೇಡಿ! ಜೀವನ ಹಾಳಾಗುತ್ತದೆ… gifts

gifts: ಹೊಸದಾಗಿ ಮದುವೆಯಾದ ಹೆಣ್ಣುಮಗಳಿಗೆ ಉಡುಗೊರೆಗಳನ್ನು ನೀಡುವುದು ಸಾಮಾನ್ಯ.  ತಾಯಿಯ ಮನೆಯಿಂದ ಮಗಳಿಗೆ ಕೆಲವು ರೀತಿಯ…

ಈ ಸುಡುವ ಬಿಸಿಲಿನಲ್ಲಿ ಐಸ್ ಕ್ರೀಮ್ ತಿನ್ನುವುದರಿಂದ ನಿಜವಾಗಿಯೂ ದೇಹ ತಂಪಾಗುತ್ತದೆಯೇ? ice cream

ice cream: ನಾವು ಒಂದು ಚಮಚ ಐಸ್ ಕ್ರೀಮ್ ಅನ್ನು ಬಾಯಿಯಲ್ಲಿ ಇಟ್ಟ ತಕ್ಷಣ ತಂಪನ್ನು…