More

    ಫಿಟ್ ಇಂಡಿಯಾ ಅಭಿಯಾನ

    ಹಳೆಯಂಗಡಿ: ನೆಹರು ಯುವ ಕೇಂದ್ರ ಮಂಗಳೂರು ಕಾರ್ಯಕ್ರಮದ ಅಡಿಯಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರಿ ವಿದ್ಯಾವಿನಾಯಕ ಯುವಕ ಮಂಡಲ ಹಳೆಯಂಗಡಿ ಆಶ್ರಯದಲ್ಲಿ ಫಿಟ್ ಇಂಡಿಯಾ ಅಭಿಯಾನ ನಡೆಯಿತು.

    ದ.ಕ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಅಭಿಲಾಷ್ ಶೆಟ್ಟಿ ಕಟೀಲು ಉದ್ಘಾಟಿಸಿದರು. ಜಿಪಂ ಸದಸ್ಯ ವಿನೋದ್ ಕುಮಾರ್ ಬೊಳ್ಳೂರು ಅಧ್ಯಕ್ಷತೆ ವಹಿಸಿದ್ದರು. ನೆಹರು ಯುವ ಕೇಂದ್ರ ಮಂಗಳೂರು ಜಿಲ್ಲಾ ಯುವ ಸಮನ್ವಯಾಧಿಕಾರಿ ರಘುವೀರ್ ಸೂಟರ್‌ಪೇಟೆ ಪ್ರಸ್ತಾವಿಸಿದರು.

    ಯುವಕ ಮಂಡಲ ಸುವರ್ಣ ಮಹೋತ್ಸವ ಸಮಿತಿ ಗೌರವ ಅಧ್ಯಕ್ಷ ಪ್ರಕಾಶ್ ಎನ್.ಶೆಟ್ಟಿ, ಕಾರ್ಯಾಧ್ಯಕ್ಷ ಸುಧಾಕರ ಆರ್.ಅಮೀನ್, ಯುವಕ ಮಂಡಲ ಅಧ್ಯಕ್ಷ ಯತೀಶ್ ಕೋಟ್ಯಾನ್, ಸಲಹಾ ಸಮಿತಿ ಅಧ್ಯಕ್ಷ ಸದಾಶಿವ ಅಂಚನ್ ಚಿಲಿಂಬಿ, ಶ್ರೀ ವಿದ್ಯಾವಿನಾಯಕ ರಜತ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಸ್ಟಾೃನಿ ಡಿಕೋಸ್ಟ, ಯುವತಿ ಮಂಡಲ ಅಧ್ಯಕ್ಷೆ ದಿವ್ಯಾಶ್ರೀ ರಮೇಶ್ ಕೋಟ್ಯಾನ್, ಮಹಿಳಾ ಮಂಡಲ ಅಧ್ಯಕ್ಷೆ ರೇಷ್ಮಾ ಅಶ್ರಫ್ ಉಪಸ್ಥಿತರಿದ್ದರು.

    ಕಿರಣ್‌ರಾಜ್ ಬಿ.ಪ್ರಾರ್ಥಿಸಿದರು. ಅಧ್ಯಕ್ಷ ಯತೀಶ್ ಕೋಟ್ಯಾನ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರಾಮದಾಸ್ ಪಾವಂಜೆ ನಿರೂಪಿಸಿದರು. ಸುವರ್ಣ ಮಹೋತ್ಸವ ಸಮಿತಿ ಕಾರ್ಯಾಧ್ಯಕ್ಷ ಸುಧಾಕರ ಆರ್.ಅಮೀನ್ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts