More

    ಪೆಟ್ರೋಲ್​ ಟ್ಯಾಂಕರ್​ಗೆ ಕಾರು ಡಿಕ್ಕಿ; ಮದುವೆ ಮುಗಿಸಿ ವಾಪಸ್​ ಆಗುತ್ತಿದ್ದವರು ಸೇರಿದ್ದು ಮಸಣಕ್ಕೆ

    ಚೆನ್ನೈ: ಪೆಟ್ರೋಲ್​ ಟ್ಯಾಂಕರ್​ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಮಿಳುನಾಡಿನ ತಿರುಪ್ಪೂರಿನ ಧಾರಾಪುರಂನಲ್ಲಿ ನಡೆದಿದೆ.

    ಮೃತರನ್ನು ಬಾಲಕೃಷ್ಣನ್ (78), ಸೆಲ್ವರಾಣಿ (70), ತಮಿಳುಮಣಿ (51), ಕಲಾರಾಣಿ (50), ಚಿತ್ರಾ (49) ಎಂದು ಗುರುತಿಸಲಾಗಿದೆ. ಇವರೆಲ್ಲರೂ ದಿಂಡಿಗಲ್​ನ ಪಳನಿಯಲ್ಲಿ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್​ ಆಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.

    ಇದನ್ನೂ ಓದಿ: ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಧಕ್ ಧಕ್ ಗರ್ಲ್; ಈ ಪಕ್ಷದಿಂದ ಲೋಕಸಭೆಗೆ ಸ್ಪರ್ಧಿಸಲಿದ್ದಾರೆ ಮಾಧುರಿ ದೀಕ್ಷಿತ್

    ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಪಳನಿಯಲ್ಲಿ ಮದುವೆ ಮುಗಿಸಿಕೊಂಡು ವಾಪಸ್​ ಆಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು, ಕಾರು ಆಲಂಕಾಡು ಬಳಿ ತಲುಪಿದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಎದುರು ಬರುತ್ತಿದ್ದ ಪೆಟ್ರೋಲ್​ ಟ್ಯಾಂಕರ್​ಗೆ ಡಿಕ್ಕಿ ಹೊಡೆದಿದೆ. ಕಾರು ಚಲಾಯಿಸುತ್ತಿದ್ದ ತಮಿಳುಮಣಿ, ಬಾಲಕೃಷ್ಣನ್, ಸೆಲ್ವರಾಣಿ, ಚಿತ್ರಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಕಲಾರಾಣಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಅಪಘಾತದ ಕುರಿತು ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts