More

    ನಿಂತಿದ್ದ ಖಾಲಿ ಕಾರಿಗೆ ಬಸ್​ ಡಿಕ್ಕಿ: ಚಾಲಕ ಸೇರಿ ಐವರು ದುರ್ಮರಣ, 25 ಮಂದಿಗೆ ಗಾಯ

    ಕನೌಜ್​: ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ರಸ್ತೆ ಬದಿ ಸುಮ್ಮನೇ ನಿಂತಿದ್ದ ಕಾರಿಗೆ​ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐದು ಮಂದಿ ಸಾವಿಗೀಡಾಗಿದ್ದು, 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಇದನ್ನೂ ಓದಿ: ಲಾಕ್​ಡೌನ್ ಸಮಯದಲ್ಲಿ ಹಿತ್ತಲಲ್ಲಿ ಬೆಳೆದ ತರಕಾರಿ ತಿಂದವಳಿಗೆ ಕಾದಿತ್ತು ಬಿಗ್​ ಶಾಕ್​!

    ಭಾನುವಾರ ಬೆಳಗ್ಗೆ ಆಗ್ರಾ-ಲಖನೌ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಸುಮಾರು 45 ಮಂದಿ ಕಾರ್ಮಿಕರನ್ನು ಹೊತ್ತು ಬಿಹಾರದ ಮಧುಬಾನಿ ಜಿಲ್ಲೆಯಿಂದ ದೆಹಲಿಗೆ ಬಸ್​ ಪ್ರಯಾಣ ಬೆಳೆಸಿತ್ತು. ಮಾರ್ಗ ಮಧ್ಯದಲ್ಲೇ ಭೀಕರ ಅಪಘಾತ ಸಂಭವಿಸಿದೆ ಎಂದು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಗೌರವ್​ ಶುಕ್ಲಾ ಎಂಬುವರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

    ಎರಡು ವಾಹನಗಳು ರಸ್ತೆಯ ಮೇಲೆ ಉರುಳಿಬಿದ್ದು ಜಖಂಗೊಂಡಿವೆ. ಬಸ್​ ಚಾಲಕ ಸೇರಿದಂತೆ ಐವರು ಸ್ಥಳದಲ್ಲಿ ಸಾವಿಗೀಡಾಗಿದ್ದಾರೆ. ಸ್ಥಳೀಯರು ಘಟನೆ ನಡೆದ ಪ್ರದೇಶಕ್ಕೆ ಆಗಮಿಸಿ ಬಸ್ಸಿನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಿದ್ದು, ಗಾಯಗೊಂಡಿದ್ದವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಇದನ್ನೂ ಓದಿ: ತಮ್ಮನಿಗೆ ಕರೊನಾ ಸೋಂಕು ದೃಢವಾದ ಬೆನ್ನಲ್ಲೇ ನೇಣಿಗೆ ಶರಣಾದ ಅಣ್ಣ

    ಅಪಘಾತದಲ್ಲಿ ಮೃತಪಟ್ಟವರಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಸಂತಾಪ ಸೂಚಿಸಿದ್ದು, ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. (ಏಜೆನ್ಸೀಸ್)

    ಚಪ್ಪಲಿ ಹೊಲಿಯೋ ಹುಡುಗ ಎಸ್ಸೆಸ್ಸೆಲ್ಸಿ ಟಾಪರ್: ಇದು ನಿಜವಲ್ಲ, ಆದ್ರೂ ಸುಳ್ಳು ಅನಿಸುವುದೂ ಇಲ್ಲ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts