ಕನೌಜ್: ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ರಸ್ತೆ ಬದಿ ಸುಮ್ಮನೇ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐದು ಮಂದಿ ಸಾವಿಗೀಡಾಗಿದ್ದು, 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಲಾಕ್ಡೌನ್ ಸಮಯದಲ್ಲಿ ಹಿತ್ತಲಲ್ಲಿ ಬೆಳೆದ ತರಕಾರಿ ತಿಂದವಳಿಗೆ ಕಾದಿತ್ತು ಬಿಗ್ ಶಾಕ್!
ಭಾನುವಾರ ಬೆಳಗ್ಗೆ ಆಗ್ರಾ-ಲಖನೌ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಸುಮಾರು 45 ಮಂದಿ ಕಾರ್ಮಿಕರನ್ನು ಹೊತ್ತು ಬಿಹಾರದ ಮಧುಬಾನಿ ಜಿಲ್ಲೆಯಿಂದ ದೆಹಲಿಗೆ ಬಸ್ ಪ್ರಯಾಣ ಬೆಳೆಸಿತ್ತು. ಮಾರ್ಗ ಮಧ್ಯದಲ್ಲೇ ಭೀಕರ ಅಪಘಾತ ಸಂಭವಿಸಿದೆ ಎಂದು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಗೌರವ್ ಶುಕ್ಲಾ ಎಂಬುವರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಎರಡು ವಾಹನಗಳು ರಸ್ತೆಯ ಮೇಲೆ ಉರುಳಿಬಿದ್ದು ಜಖಂಗೊಂಡಿವೆ. ಬಸ್ ಚಾಲಕ ಸೇರಿದಂತೆ ಐವರು ಸ್ಥಳದಲ್ಲಿ ಸಾವಿಗೀಡಾಗಿದ್ದಾರೆ. ಸ್ಥಳೀಯರು ಘಟನೆ ನಡೆದ ಪ್ರದೇಶಕ್ಕೆ ಆಗಮಿಸಿ ಬಸ್ಸಿನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಿದ್ದು, ಗಾಯಗೊಂಡಿದ್ದವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ತಮ್ಮನಿಗೆ ಕರೊನಾ ಸೋಂಕು ದೃಢವಾದ ಬೆನ್ನಲ್ಲೇ ನೇಣಿಗೆ ಶರಣಾದ ಅಣ್ಣ
ಅಪಘಾತದಲ್ಲಿ ಮೃತಪಟ್ಟವರಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. (ಏಜೆನ್ಸೀಸ್)
ಚಪ್ಪಲಿ ಹೊಲಿಯೋ ಹುಡುಗ ಎಸ್ಸೆಸ್ಸೆಲ್ಸಿ ಟಾಪರ್: ಇದು ನಿಜವಲ್ಲ, ಆದ್ರೂ ಸುಳ್ಳು ಅನಿಸುವುದೂ ಇಲ್ಲ!