ತಿಥಿ ಕಾರ್ಯ ಮುಗಿಸಿ ರಾತ್ರಿ ಸವಿನಿದ್ದೆಗೆ ಜಾರಿದ್ದ ಐವರು ಮಹಿಳೆಯರು ಬೆಳ್ಳಂಬೆಳಗ್ಗೆ ದಾರುಣ ಸಾವು!

ಹೈದರಾಬಾದ್​: ಪೂರ್ವಜರು ಕಟ್ಟಿಸಿದ್ದ ಹಳೇ ಮನೆಯ ಮಣ್ಣಿನ ಚಾವಣಿ ಕುಸಿದು ಬಿದ್ದು ಒಂದೇ ಕುಟುಂಬದ ಐವರು ಮಹಿಳೆಯರು ದಾರುಣ ಸಾವಿಗೀಡಾಗಿರುವ ಘಟನೆ ತೆಲಂಗಾಣದ ವಾನಪರ್ತೆ ಜಿಲ್ಲೆಯಲ್ಲಿ ನಡೆದಿದೆ. ದುರಂತವೆಂದರೆ ಸಾವಿಗೂ ಮುನ್ನ ಐವರು ಸಹ ಕುಟುಂಬದ ಸದಸ್ಯರೊಬ್ಬರ ತಿಥಿ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಗೋಪಾಲ್​ಪೇಟೆ ಮಂಡಲದ ಬುದ್ದರಾಮ್ ಗ್ರಾಮದಲ್ಲಿ ಇಂದು (ಅ.25) ಬೆಳ್ಳಂಬೆಳಗ್ಗೆ ದುರ್ಘಟನೆ ಸಂಭವಿಸಿದೆ. ನಾಲ್ವರು ಗಂಡು ಮಕ್ಕಳು ತಮ್ಮ ಪತ್ನಿ ಹಾಗೂ ಮಕ್ಕಳ ಜತೆ ಸೇರಿ ತಂದೆಯ ವರ್ಷದ ತಿಥಿ ಕಾರ್ಯ ನೆರವೇರಿಸುತ್ತಿದ್ದರು. ಈ ಕಾರ್ಯಕ್ರಮ … Continue reading ತಿಥಿ ಕಾರ್ಯ ಮುಗಿಸಿ ರಾತ್ರಿ ಸವಿನಿದ್ದೆಗೆ ಜಾರಿದ್ದ ಐವರು ಮಹಿಳೆಯರು ಬೆಳ್ಳಂಬೆಳಗ್ಗೆ ದಾರುಣ ಸಾವು!