ಹೂವಿನಹಡಗಲಿ: ರಾಜ್ಯ ಸರ್ಕಾರದ ಒಳಮೀಸಲಾತಿ ಜಾರಿ ಮಾಡುವ ನಿರ್ಧಾರ ಖಂಡಿಸಿ ತಾಲೂಕಿನ ದಾಸರಹಳ್ಳಿತಾಂಡಾದ ಯುವಕ ಸೇವಾನಾಯ್ಕ ಒಂಟಿಯಾಗಿ ಮಂಗಳವಾರ ಪ್ರತಿಭಟನೆ ನಡೆಸಿದ್ದಾನೆ.
ಒಳಮೀಸಲಾತಿ ಜಾರಿಯಿಂದ ಬಂಜಾರ ಸೇರಿ ವಿವಿಧ ಸಮುದಾಯಗಳಿಗೆ ಅನ್ಯಾಯವಾಗಿದೆ. ಸಮಾಜದ ಮುಖ್ಯವಾಹಿನಿಗೆ ಬರಬೇಕಾದ ಸಮುದಾಯಗಳು ಮತ್ತೆ ಹಿಂದುಳಿಯಲಿವೆ. ಕೂಡಲೇ ಸರ್ಕಾರ ಈ ನಿರ್ಧಾರವನ್ನು ಕೈಬಿಡಬೇಕು. ಇಲ್ಲದಿದ್ದರೆ ಮುಂಬರುವ ವಿಧಾನಸಭಾ ಚುನಾವಣೆ ವೇಳೆ ಮತದಾನ ಬಹಿಷ್ಕರಿಸುವುದಾಗಿ ತಿಳಿಸಿದ್ದಾನೆ.
ಸೇವಾನಾಯ್ಕ ಪಟ್ಟಣದ ಶಾಸ್ತ್ರಿ ವೃತ್ತದಲ್ಲಿ ಬೆಳಗ್ಗೆಯಿಂದಲೇ ಪ್ರತಿಭಟನೆ ಆರಂಭಿಸಿದ ವಿಷಯ ಸಂಜೆಯ ವೇಳೆ ತಿಳಿದಿದ್ದರಿಂದ, ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆತನ ಮನವೊಲಿಸಿದ್ದಾರೆ.