More

    ಪ್ರತ್ಯೇಕ ರಾಷ್ಟ್ರ ಹೇಳಿಕೆ; ಸಂಸದ ಡಿಕೆ ಸುರೇಶ್ ಸ್ಪಷ್ಟನೆ ಹೀಗಿದೆ?​

    ಬೆಂಗಳೂರು: ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ನನ್ನ ಧರ್ಮ. ಕೇಂದ್ರ ಸರ್ಕಾರ ರಾಜ್ಯದ ಮೇಲೆ ತೋರಿಸುತ್ತಿರುವ ಮಲತಾಯಿ ಧೋರಣೆಯನ್ನು ಪ್ರಶ್ನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಈ ಅನ್ಯಾಯ ಹೀಗೆ ಮುಂದುವರೆದರೆ, ಪ್ರತ್ಯೇಕದ ಕೂಗು ಈಗಾಗಲೇ ಎಲ್ಲ ಕಡೆ ಬಂದಿದೆ ಎಂದು ನಾನು ಹೇಳಿದ್ದೇನೆ. ಬಿಜೆಪಿ ನನ್ನ ಹೇಳಿಕೆಯನ್ನು ತಿರುಚುವುದರಲ್ಲಿ ನಿಸ್ಸೀಮರು ಎಂದು ಸಂಸದ ಡಿಕೆ ಸುರೇಶ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಇದನ್ನೂ ಓದಿ:‘100 ರೂ. ನೂರು ದಿನಗಳು’! ಶತದಿನೋತ್ಸವ ಸಂಭ್ರಮದಲ್ಲಿ ’12 ಫೇಲ್’​

    ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕನ್ನಡಿಗರಿಗೆ ಅನ್ಯಾಯ ಆಗಿದೆ ಎಂದು ನಾನು ಮಾತನಾಡಿದ್ದೆ. ಉತ್ತರ ಪ್ರದೇಶಕ್ಕೆ 33% ರಷ್ಟು ಹಣವನ್ನು ನೀಡುತ್ತಿದ್ದಾರೆ. ನಮ್ಮ ರಾಜ್ಯಕ್ಕೆ ತೆರಿಗೆಯ ಹಣವನ್ನು ವಾಪಸ್ ಕೊಡಿ ಎಂದು ಪ್ರಶ್ನೆ ಮಾಡಿದ್ದು ಹೇಗೆ ತಪ್ಪಾಗುತ್ತದೆ? ರಾಜ್ಯದಲ್ಲಿ ಬರಗಾಲ ತಾಂಡವ ಆಡುತ್ತಿದೆ. 224 ತಾಲೂಕು ಬರಗಾಲ ಪೀಡಿತ ತಾಲೂಕು ಎಂದು ಘೋಷಣೆ ಆಗಿದೆ. ಆದರೂ ಸಹ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ನಾನು ಮಾತನಾಡಿದ್ದೇನೆ. ಅದರಲ್ಲಿ ಯಾವುದೇ ಹಿಂಪಡೆಯುವ ಪ್ರಶ್ನೆ ಇಲ್ಲ. ನಾಡಿನ ಹಿತಕ್ಕೋಸ್ಕರ ನನ್ನ ಹೋರಾಟ ಎಂದರು.

    ಬಿಜೆಪಿಯವರು ಎಷ್ಟೇ ರಾಜಕಾರಣ ಮಾಡಿದರು ನನ್ನನ್ನು ನಾಯಕನನ್ನಾಗಿ ಮಾಡಲು ಅವರು ಹೊರಟಿದ್ದಾರೆ. ನನ್ನ ವಿರುದ್ಧ ಯಾವುದೇ ಠಾಣೆಯಲ್ಲಿ ಬೇಕಾದರೂ ದೂರನ್ನು ನೀಡಲಿ. ನಾನು ಹೋರಾಟ ಮಾಡಲು ಸಿದ್ಧನಿದ್ದೇನೆ. ಯಾವುದೇ ರಾಜ್ಯದ ಮುಖ್ಯಮಂತ್ರಿಯನ್ನು ಕ್ಷಣಮಾತ್ರದಲ್ಲಿ ಬದಲಾವಣೆ ಮಾಡುವ ಬಿಜೆಪಿಯವರಿಗೆ ಅಭಿವೃದ್ಧಿಯ ವಿಚಾರದಲ್ಲಿ ಸರಿಯಾದ ಹಿತಾಸಕ್ತಿ ಗೊತ್ತಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

    ನಿಮಗೆ ಬೇಕಾದಾಗ ಹೇಗೆ ಬೇಕಾದರೂ ಆಡಳಿತವನ್ನು ಮಾಡುತ್ತೀರಿ. ನನ್ನ ವಿರುದ್ಧ ಕೇಸ್ ಹಾಕಬೇಕು, ಅಮಾನತು ಮಾಡಬೇಕು ಎನ್ನುವುದು ಬಿಜೆಪಿಯವರ ಉದ್ದೇಶ ಆಗಿದ್ದು ನನ್ನ ಹಾಗೂ ದಕ್ಷಿಣ ಭಾರತದ ಜನರ ಪರ ನಾನು ಮಾತನಾಡಿದ್ದೇನೆ. ಇದನ್ನು ತಪ್ಪು ಎನ್ನುವ ಬಿಜೆಪಿಯವರು ಡೋಂಗಿ ಹಿಂದುತ್ವವಾದಿಗಳು. ಡೋಂಗಿ ಹಿಂದುತ್ವ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದೀರಿ. ಬಜೆಟ್‌ನಲ್ಲಿ ನಿಮಗೆ ದೇಶಕ್ಕೋಸ್ಕರ ಏನನ್ನೂ ಕೊಡಲು ಸಾಧ್ಯ ಆಗಿಲ್ಲ. ಇದನ್ನು ಮುಚ್ಚಿಕೊಳ್ಳಲು ನನ್ನ ಹೇಳಿಕೆಯನ್ನು ತಿರುಚಿ ರಾಜಕಾರಣ ಮಾಡಲಾಗುತ್ತಿದೆ ಎಂದು ಹರಿಹಾಯ್ದರು.

    ಕರ್ನಾಟಕದಿಂದ ಕೇಂದ್ರದ ಬೊಕ್ಕಸಕ್ಕೆ ಅತಿ ಹೆಚ್ಚು ಕೊಡುಗೆ ನೀಡುವ ರಾಜ್ಯಗಳಲ್ಲಿ ಒಂದು. ಅದಕ್ಕೆ ಪ್ರತಿಯಾಗಿ ನಾವು ಪಡೆದುಕೊಂಡ ಅನುದಾನ, ಯೋಜನೆಗಳ ವಿಚಾರದಲ್ಲಿ ಸಂಪೂರ್ಣ ಮಲತಾಯಿ ಧೋರಣೆ ನಮಗೆ ಸಿಕ್ಕಿದೆ. ಕರ್ನಾಟಕ ಭಾರತದಲ್ಲೇ ಇದೆ. ಇದನ್ನು ಒಕ್ಕೂಟ ಸರ್ಕಾರ ಮರೆಯಬಾರದು. ಇದಕ್ಕೆ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದರೆ ನಾವು “ಪ್ರತ್ಯೇಕತಾವಾದಿ”ಗಳು! ಎಂದು ಕೇಂದ್ರದ ವಿರುದ್ಧ ಕಿಡಿಕಾಡಿದರು.

    ಮೇಕೆದಾಟು ಇರಲಿ, ಮಹದಾಯಿ ಇರಲಿ, ಬರ ಪರಿಹಾರ ಇರಲಿ, ಕೇಂದ್ರ ಬಿಜೆಪಿ ಸರಕಾರ ನಮ್ಮ ಯಾವುದೇ ಸಮಸ್ಯೆಗಳಿಗೆ ಈವರೆಗೆ ಸ್ಪಂದಿಸಿಲ್ಲ. ನಮ್ಮ ನಾಡಿನ ಭಾಷೆ ಉಳಿಸಿಕೊಳ್ಳಲು ನಾಮಫಲಕಗಳನ್ನು ಕನ್ನಡದಲ್ಲಿ ಕಡ್ಡಾಯ ಮಾಡಿದರೆ, ಅದನ್ನು ಬದಲಾಯಿಸಲು ಸುಗ್ರೀವಾಜ್ಞೆಗಳನ್ನೂ ಇವರು ರಾತ್ರೋ ರಾತ್ರಿ ತರುತ್ತಾರೆ. ದೇಶಭಕ್ತಿ, ಐಕ್ಯತೆ ಮತ್ತು ಸಮಗ್ರತೆ ಬಗ್ಗೆ ಬೋಗಸ್ ಜನತಾ ಪಾರ್ಟಿಯವರಿಂದ ಕಲಿಯುವ ದುಸ್ಥಿತಿ ನಮಗೆ ಬಂದಿಲ್ಲ, ಬರುವುದೂ ಇಲ್ಲ ಎಂದು ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ರಾಜೀನಾಮೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts