More

    ಗಣರಾಜ್ಯೋತ್ಸವಕ್ಕೆ ಅತಿಥಿಯಾಗಿ ರೇಷ್ಮಾ ಬೇಗಂ ಆಯ್ಕೆ

    ಅಳವಂಡಿ: ದೆಹಲಿಯಲ್ಲಿ ಜ.26 ರಂದು ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಲು ಕೊಪ್ಪಳ ತಾಲೂಕಿನ ಘಟ್ಟಿರಡ್ಡಿಹಾಳ ಯೋಗಪಟು ರೇಷ್ಮಾ ಬೇಗಂ ವಡ್ಡಟ್ಟಿ ಆಯ್ಕೆಯಾಗಿದ್ದಾರೆ.


    ಗಣರಾಜ್ಯೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ರಾಜ್ಯದ ಪರವಾಗಿ ಯೋಗ ಪ್ರದರ್ಶನ ನೀಡಲಿದ್ದಾರೆ. ರಾಜ್ಯದಿಂದ ಒಟ್ಟು 18 ಜನ ಯೋಗ ತರಬೇತುದಾರರನ್ನು ರಾಜ್ಯ ಆಯುಷ್ ಇಲಾಖೆ ಆಯುಕ್ತರು ನಾಮನಿರ್ದೇಶನ ಮಾಡಿದ ಪಟ್ಟಿ ಕೇಂದ್ರ ಸರ್ಕಾರಕ್ಕೆ ಕಳಿಸಿದ್ದಾರೆ. ರೇಷ್ಮಾ ಬೇಗಂ ವಡ್ಡಟ್ಟಿ ಕೊಪ್ಪಳ ತಾಲೂಕಿನ ಕಾಮನೂರಿನ ಆಯುರ್ವೇದ ಕ್ಷೇಮ ಕೇಂದ್ರದ ಆಸ್ಪತ್ರೆಯಲ್ಲಿ ಯೋಗ ಶಿಕ್ಷಕಿ ಹಾಗೂ ತರಬೇತಿದಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ ವಿಶ್ವ ವಿದ್ಯಾಲಯದಲ್ಲಿ ಯೋಗದಲ್ಲಿ ಉನ್ನತ ವ್ಯಾಸಂಗ ಪೂರ್ಣಗೊಳಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಯೋಗಾಭ್ಯಾಸದಲ್ಲಿ ತೊಡಗಿದ್ದು, ಹಲವು ಪ್ರಶಸ್ತಿ ಹಾಗೂ ಪುರಸ್ಕಾರ ಪಡೆದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts