More

    ಗ್ರಾಮೀಣ ಶಾಸಕಿ ಇತರರಿಗೆ ಮಾದರಿ

    ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇತರ ಶಾಸಕರಿಗೆ ಮಾದರಿಯಾಗಿದ್ದು, ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾಮಗಾರಿಗಳು ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಗೆಲ್ಲಿಸಲಿದೆ ಎಂದು ಎಐಸಿಸಿ ವಕ್ತಾರೆ ಪ್ರಣೀತಿ ಶಿಂಧೆ ಹೇಳಿದರು.

    ಗ್ರಾಮೀಣ ಕ್ಷೇತ್ರದ ದೇಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ಪರ ಶನಿವಾರ ಏರ್ಪಡಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಶಾಸಕರು ಮತ್ತೆ ಐದು ವರ್ಷಕ್ಕೆ ಕ್ಷೇತ್ರಕ್ಕೆ ಬರುತ್ತಾರೆ. ಆದರೆ, ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕ್ಷೇತ್ರದ ಅಭಿವೃದ್ಧಿಗಾಗಿ ದಿನದ 24 ಗಂಟೆಗಳ ಕಾಲ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು.

    ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ನೋಡಿದರೆ ಎಲ್ಲ ಜನಪ್ರತಿನಿಧಿಗಳಿಗೆ ಅವರು ಆದರ್ಶರಾಗುತ್ತಾರೆ. ಅವರು ನಿರಂತರವಾಗಿ ಜನರೊಂದಿಗೆ ಸಂಪರ್ಕದಲ್ಲಿರುವುದು ಕೂಡ ವಿಶೇಷವಾಗಿದೆ. ಅಂತಹ ಶಾಸಕರನ್ನು ಗ್ರಾಮೀಣ ಕ್ಷೇತ್ರದ ಜನರು ಯಾವುದೇ ಕಾರಣದಿಂದ ಕಳೆದುಕೊಳ್ಳಲು ಇಚ್ಛಿಸುವುದಿಲ್ಲ ಎನ್ನುವ ವಿಶ್ವಾಸವಿದೆ ಎಂದರು.

    ಕಾಂಗ್ರೆಸ ಪಕ್ಷ ಬಡವರ ಪರವಾಗಿರುವ ಪಕ್ಷ. ಹಾಗಾಗಿ, ಈ ಬಾರಿಯ ಚುನಾವಣೆಯಲ್ಲಿ ಬಡವರ ಪರವಾಗಿ ಹಲವಾರು ಗ್ಯಾರಂಟಿಗಳನ್ನು ಘೋಷಿಸಿದೆ. 200 ಯೂನಿಟ್ ಉಚಿತ ವಿದ್ಯುತ್, ಮನೆಯ ಯಜಮಾನಿಗೆ ಪ್ರತಿ ತಿಂಗಳ 2 ಸಾವಿರ ರೂ., ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ಭತ್ಯೆ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಿಸಿದೆ. ರಾಜ್ಯದಲ್ಲಿ ಈ ಬಾರಿ ಬದಲಾವಣೆಯಾಗಲಿದ್ದು, ನಿಜವಾದ ಪ್ರಗತಿ ಕಾಣಲಿದ್ದೀರಿ. ಹಾಗಾಗಿ, ಹೆಬ್ಬಾಳ್ಕರ್ ಅವರಿಗೆ ಮತ ನೀಡುವ ಮೂಲಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತನ್ನಿ ಎಂದು ಮನವಿ ಮಾಡಿದರು.

    ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳ್ಕರ್ ಮಾತನಾಡಿ, ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಳೆದ 5 ವರ್ಷ ಮಾಡಿರುವ ಕೆಲಸವನ್ನು ನೀವೆಲ್ಲ ಹತ್ತಿರದಿಂದ ನೋಡಿದ್ದೀರಿ. ನಿಮ್ಮ ಮನೆ ಮಗಳಂತೆ ಜವಾಬ್ದಾರಿ ನಿರ್ವಹಿಸಿದ್ದಾರೆ. ನಿಮ್ಮ ಕಷ್ಟ ಕಾಲದಲ್ಲಿ ನಿಮ್ಮೊಂದಿಗೆ ನಿಂತಿದ್ದಾರೆ. ಕ್ಷೇತ್ರದಲ್ಲಿ ಹಿಂದೆಂದೂ ಕಾಣದಂತಹ ರೀತಿಯಲ್ಲಿ ಅಭಿವೃದ್ಧಿ ಮಾಡಿದ್ದಾರೆ. ಈ ಬಾರಿ ಲಕ್ಷ್ಮೀ ಅವರನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts