More

    ಕುರಿಗಾಹಿಗಳಿಗೆ ಆರ್ಥಿಕ ನೆರವು

    ಬೆಳಗಾವಿ: ತಾಲೂಕಿನ ವಿವಿಧ ಭಾಗಗಳಲ್ಲಿ ವಿಷಪೂರಿತ ಆಹಾರ ಸೇವಿಸಿ ಕುರಿಗಳು ಸಾವಿಗೀಡಾದ ಘಟನೆಗೆ ತಕ್ಷಣ ಸ್ಪಂದಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭಾನುವಾರ ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಆರ್ಥಿಕ ನೆರವು ನೀಡಿದರು. ಸುಳಗಾ ಗ್ರಾಮದ ಪರುಶರಾಮ ಭೀಮಾ ಉಚಗಾಂವಕರ್ ಹಾಗೂ ಯಲ್ಲಪ್ಪ ರಾಮಾ ನರೋಟಿ ಕುಟುಂಬಗಳಿಗೆ ಸೇರಿದ 15 ಕುರಿಗಳು ವಿಷಪೂರಿತ ಸಸ್ಯ ತಿಂದು ಸಾವನ್ನಪ್ಪಿದ್ದವು. ಸುದ್ದಿ ತಿಳಿದು ಅವರ ಮನೆಗಳಿಗೆ ತೆರಳಿದ ಲಕ್ಷ್ಮೀ, ಸಿಎಂ ಪರಿಹಾರ ನಿಧಿಯಿಂದ ಹೆಚ್ಚಿನ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ, ಬಾಗಣ್ಣ ನರೋಟಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts