More

    ಅಂಗಡಿಗಳಿಗೆ ದಂಡ ವಿಧಿಸಿದ ಅಧಿಕಾರಿಗಳು

    ರಾಯಬಾಗ: ಇಲ್ಲಿನ ಪಪಂ ಮುಖ್ಯಾಧಿಕಾರಿ ಎಸ್.ಆರ್.ಮಾಂಗ ಮತ್ತು ಸಿಬ್ಬಂದಿ ಬುಧವಾರ ಅವಧಿ ಮೀರಿದ ತಂಪು ಪಾನೀಯ ಮಾರಾಟ ಮಾಡುತ್ತಿದ್ದ ಬೇಕರಿ ಹಾಗೂ ಅಂಗಡಿಗಳಿಗೆ ದಂಡ ವಿಧಿಸಿದರು. ಬಳಿಕ ಅಂಗಡಿಗಳಲ್ಲಿ ಸ್ಯಾನಿಟೈಸರ್ ಬಳಕೆ ಮಾಡುತ್ತಿರುವ ಕುರಿತು ಪರಿಶೀಲಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಖಾ ತಿಂದು ಉಗುಳುವವರು ಹಾಗೂ ಮಾಸ್ಕ್ ಧರಿಸದೇ ಓಡಾಡುತ್ತಿರುವವರಿಗೆ ದಂಡ ವಿಧಿಸಿದರು. ಅವಧಿ ಮೀರಿದ ತಂಪು ಪಾನೀಯಗಳನ್ನು ಚರಂಡಿಗೆ ಸುರಿದು ನಾಶಪಡಿಸಲಾಯಿತು. ಸಿಬ್ಬಂದಿ ವಿ.ಆರ್. ಬಳ್ಳಾರಿ, ಬಿ.ಎಂ. ಬಿಲವಡೆ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts