More

    ಭಕ್ತಾದಿಗಳ ಗಮನಕ್ಕೆ; ಶಬರಿಮಲೆಗೆ ಹೋಗುವುದಿದ್ದರೆ ಇವೆಲ್ಲ ಕಡ್ಡಾಯ…

    ಬೆಂಗಳೂರು: ಕೇರಳದ ಶ್ರೀಕ್ಷೇತ್ರ ಶಬರಿಮಲೈಗೆ ತೆರಳುವ ಭಕ್ತಾದಿಗಳು, ಯಾತ್ರಾರ್ಥಿಗಳು, ಸಾರ್ವಜನಿಕರು https://sabarimalaonline.org ಪೋರ್ಟಲ್‍ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಂಡಿರುವವರಿಗೆ ಅನುಮತಿಸಿದ ನಂತರದಲ್ಲಿ ಮಾತ್ರ ಶಬರಿಮಲೈ ದರ್ಶನಕ್ಕೆ ಅವಕಾಶ ಇರುತ್ತದೆ.

    ಪ್ರಥಮವಾಗಿ ಪ್ರತಿದಿನ ಒಂದು ಸಾವಿರ ಯಾತ್ರಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ವಾರಾಂತ್ಯದಲ್ಲಿ ಪ್ರತಿ ದಿನ ಎರಡು ಸಾವಿರ ಯಾತ್ರಾರ್ಥಿಗಳಿಗೆ ಮಾತ್ರ ಅವಕಾಶ ಇರುತ್ತದೆ.  ಅದರಂತೆ ಮೊದಲು ನೊಂದಣಿ ಮಾಡಿಕೊಂಡವರಿಗೆ ಮೊದಲ ಆದ್ಯತೆ ಇರುತ್ತದೆ.
    ಭೇಟಿ ನೀಡುವ 48 ಗಂಟೆ ಅವಧಿಯ ಮೊದಲು ಕೋವಿಡ್-19 ಪ್ರಮಾಣ ಪತ್ರ ಹೊಂದಿರುವುದು ಕಡ್ಡಾಯ. ಪ್ರವೇಶ ಸ್ಥಳದಲ್ಲಿ ಆ್ಯಂಟಿಜೆನ್​ ಟೆಸ್ಟ್​ಗೆ ಅವಕಾಶ ಕಲ್ಪಿಸಲಾಗಿದ್ದು ಅದರ ವೆಚ್ಚವನ್ನು ಯಾತ್ರಾರ್ಥಿಗಳೇ ಭರಿಸಬೇಕಾಗಿರುತ್ತದೆ.

    ಹತ್ತು ವರ್ಷಗಳ ಒಳಪಟ್ಟು ಮತ್ತು 60-65 ವರ್ಷಗಳಿಗೆ ಮೇಲ್ಪಟ್ಟವರಿಗೆ ಹಾಗೂ ಅನಾರೋಗ್ಯದ ಲಕ್ಷಣಗಳು ಇರುವಂತಹರಿಗೆ ಯಾತ್ರಾ ಪ್ರದೇಶಕ್ಕೆ ಅನುಮತಿ ಇರುವುದಿಲ್ಲ.  ಬಿಪಿಎಲ್ ಕಾರ್ಡ್, ಆಯುಷ್ಮಾನ್ ಕಾರ್ಡ್ ಇತ್ಯಾದಿ ಕಾರ್ಡ್ ಹೊಂದಿರುವವರು ಯಾತ್ರೆಗೆ ತೆರಳುವ ಸಮಯದಲ್ಲಿ ಅದನ್ನು ಹೊಂದಿರಬೇಕು.

    ತುಪ್ಪದ ಅಭಿಷೇಕ, ಪಂಪಾನದಿ ಸ್ನಾನ, ಸನ್ನಿಧಾನಂನಲ್ಲಿ ರಾತ್ರಿ ತಂಗುವುದು ಹಾಗೂ ಪಂಪಾ ಮತ್ತು ಗಣಪತಿ ಕೋವಿಲ್‍ಗೆ ಅವಕಾಶ ಇರುವುದಿಲ್ಲ. ಯಾತ್ರಾರ್ಥಿಗಳ ಪ್ರಯಾಣಕ್ಕೆ ಎರುಮೆಲು ಮತ್ತು ವೇದಸಾರಿಕ್ಕರ ಮಾರ್ಗದಲ್ಲಿ ಮಾತ್ರ ಅವಕಾಶವಿರುತ್ತದೆ ಎಂದು ಧಾರ್ಮಿಕ ದತ್ತಿ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

    ಅಲ್ಲೂ ಪ್ರತಿಭಟನೆ, ಇಲ್ಲೂ ಪ್ರತಿಭಟನೆ; ನಮಗೆ ಈ ಠಾಣೆಯೇ ಬೇಡ ಎಂದ ಪೊಲೀಸರು

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts