More

    ನಿಷ್ಠಾವಂತರಿಗೆ ಎಂದಿಗೂ ಬೆಲೆ – ಡಿಸಿಎಂ ಲಕ್ಷ್ಮಣ ಸವದಿ

    ಸಂಬರಗಿ: ನಿಷ್ಠಾವಂತರಾಗಿ, ಶ್ರಮವಹಿಸಿ ದುಡಿಯುವವರನ್ನು ಗುರುತಿಸಿ ಬಿಜೆಪಿ ಪಕ್ಷ ಅವರಿಗೆ ಉನ್ನತ ಸ್ಥಾನಮಾನ ನೀಡುತ್ತದೆ ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

    ಭಾನುವಾರ ಸಮೀಪದ ಕಿರಣಗಿ ಗ್ರಾಮದಲ್ಲಿ ಗ್ರಾಮಸ್ಥರಿಂದ ಹಮ್ಮಿಕೊಂಡಿದ್ದ ಸತ್ಕಾರ ಸಮಾರಂಭ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ನಾನು ಹಾಗೂ ಸಚಿವ ಶ್ರೀಮಂತ ಪಾಟೀಲ ಮತಕ್ಷೇತ್ರದ ಅಭಿವೃದ್ಧಿಗೆ ಪ್ರಮಾಣಿಕವಾಗಿ ಪ್ರಯತ್ನಿಸುತ್ತಿದ್ದೇವೆ.

    ಹೆಚ್ಚಿನ ಅಭಿವೃದ್ಧಿ ಕೈಗೊಳ್ಳಲು ಅಗತ್ಯ ಸಹಕಾರ ನೀಡಬೇಕು ಎಂದು ಕೋರಿದರು. ಚುನಾವಣೆಯಲ್ಲಿ ಸೋತ ನನಗೆ ಪಕ್ಷವು ರಾಜ್ಯದ ಉಪಮುಖ್ಯಮಂತ್ರಿ ಸ್ಥಾನ ನೀಡಿದೆ. ಆದರೆ, ಬೇರೆ ಪಕ್ಷಗಳಲ್ಲಿ ಈ ರೀತಿ ನಡೆದುಕೊಳ್ಳುವುದಿಲ್ಲ. ನಿಷ್ಠಾವಂತರನ್ನು ಪಕ್ಷ ಎಂದೂ ಕೈ ಬಿಡುವುದಿಲ್ಲ ಎಂದು ಅವರು ತಿಳಿಸಿದರು.

    ಸಚಿವ ಶ್ರೀಮಂತ ಪಾಟೀಲ ಮಾತನಾಡಿ, ಮತದಾರರಿಗೆ ನೀಡಿದ ಭರವಸೆಯಂತೆ ಮತಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವೆ. ಈಗಾಗಲೇ ಕ್ಷೇತ್ರದಲ್ಲಿ ಅಗತ್ಯ ಅಭಿವೃದ್ಧಿ ಪರ ಯೋಜನೆ ಜಾರಿಗೊಳಿಸಲಾಗಿದೆ ಎಂದರು. ಕೃಷ್ಣಾ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ, ಚಿಕ್ಕೋಡಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಿಂಗಪ್ಪ ಖೋಕಲೆ, ವಿನಾಯಕ ಬಾಗಡಿ, ಬಾಳಸಾಹೇಬ ಪಾಟೀಲ, ಪ್ರಕಾಶ ಪಾಟೀಲ, ತಮ್ಮಣ್ಣ ಪಾರಶೆಟ್ಟಿ, ದೀಪಕ ಪಾಟೀಲ, ತಮ್ಮಣ್ಣ ಮೆಂಡಿಗೇರಿ, ಶಿವಾನಂದ ಗೋಲಬಾವಿ, ಈಶ್ವರ ಕುಂಬಾರೆ, ಪಕ್ಷದ ಕಾರ್ಯಕರ್ತರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts