More

    ಡಾ.ಸಿ.ಎನ್. ಮಂಜುನಾಥ್ ಅವರ ಸೇವಾ ಅವಧಿ ವಿಸ್ತರಿಸಲು ಒತ್ತಾಯ

    ಮೈಸೂರು: ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರ ಸೇವಾ ಅವಧಿಯು ಜು.19ಕ್ಕೆ ಅಂತ್ಯವಾಗಲಿದ್ದು, ಅವರ ಸೇವಾ ಅವಧಿಯನ್ನು ಮತ್ತೊಂದು ಬಾರಿಗೆ ವಿಸ್ತರಿಸಲು ಆಗ್ರಹಿಸಿ ಮೈಸೂರು ಸಮಾನ ಮನಸ್ಕ ಬಳಗದವರು ಕೆಆರ್‌ಎಸ್ ರಸ್ತೆಯಲ್ಲಿರುವ ಸಂಸ್ಥೆಯ ಮುಂಭಾಗ ಸೋಮವಾರ ಪ್ರತಿಭಟಿಸಿದರು.


    ನ್ಯಾಷನಲ್ ಮೆಡಿಕಲ್ ಕೌನ್ಸಿಲ್ ಪ್ರಕಾರ ಯಾವುದೇ ಸಂಸ್ಥೆಯ ಮುಖ್ಯಸ್ಥರಾಗಿ 70 ವರ್ಷದವರೆಗೆ ಸೇವೆಯಲ್ಲಿ ಮುಂದುವರೆಯಲು ಅವಕಾಶ ಇದೆ. ಅದರಂತೆಯೇ ಡಾ.ಸಿ.ಎನ್. ಮಂಜುನಾಥ್ ಅವರನ್ನು ಮತ್ತೊಂದು ಅವಧಿಗೆ ವಿಸ್ತರಿಸಬೇಕು ಎಂದು ಅವರು ಒತ್ತಾಯಿಸಿದರು.


    ಈಗಾಗಲೇ ಅವರ ಅವಧಿಯಲ್ಲಿ ಬೆಂಗಳೂರು, ಮೈಸೂರಿನಲ್ಲಿ ಆಸ್ಪತ್ರೆಯು ಬಡಜನರ ಸೇವೆ ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರವು ಗುಲ್ಬರ್ಗಾ ಹಾಗೂ ಹುಬ್ಬಳ್ಳಿಯಲ್ಲಿಯೂ ಆಸ್ಪತ್ರೆಯು ಆರಂಭವಾಗುತ್ತಿದೆ. ಈ ಹಂತದಲ್ಲಿ ಇವರ ಸೇವೆ ಅಗತ್ಯವಿದೆ ಎಂದು ಅಲ್ಲಿನ ಸಿಬ್ಬಂದಿ ಜೊತೆಗೆ ರಾಜ್ಯದ ಜನರು ಆಗ್ರಹಿಸಿದ್ದಾರೆ . ಹೀಗಾಗಿ, ರಾಜ್ಯ ಸರ್ಕಾರವು ಅವರ ಸೇವೆಯನ್ನು ಪರಿಗಣಿಸಿ ವಿಸ್ತರಿಸಬೇಕು ಎಂದು ಅವರು ಆಗ್ರಹಿಸಿದರು.


    ಮಾಜಿ ಶಾಸಕ ಎಸ್. ಬಾಲರಾಜು, ನಗರಪಾಲಿಕೆ ಸದಸ್ಯ ಕೆ.ವಿ. ಶ್ರೀಧರ್, ಮಾಜಿ ಸದಸ್ಯ ಕೆ.ವಿ. ಮಲ್ಲೇಶ್, ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಪಡುವಾರಹಳ್ಳಿ ಎಂ. ರಾಮಕೃಷ್ಣ, ಮುಖಂಡರಾದ ಸಿ.ಡಿ. ಕುಮಾರ್, ಬಿ. ಕುಮಾರ್, ಕಿಟ್ಟಿ, ಸುರೇಂದ್ರ, ಚಾಮ ಮೊದಲಾದವರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts