More

    ಎಸ್ಸಿ, ಎಸ್ಟಿ ನೌಕರರಿಗೆ ಸಾಮಾಜಿಕ ನ್ಯಾಯ ಒದಗಿಸಲು ಒತ್ತಾಯ

    ಚಿಕ್ಕಮಗಳೂರು: ಪರಿಶಿಷ್ಟ ಜಾತಿ ಮತ್ತು ವರ್ಗದ ನೌಕರರಿಗೆ ಸಂವಿಧಾನದ ಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಿ ಸಾಮಾಜಿಕ ನ್ಯಾಯವನ್ನು ಒದಗಿಸಿಕೊಡಬೇಕು ಎಂದು ಒತ್ತಾಯಿಸಿ ಡಿಎಸ್‌ಎಸ್ ಮುಖಂಡರು ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರಿಗೆ ಮನವಿ ಸಲ್ಲಿ ಸಿದರು.

    ಈ ವೇಳೆ ಮಾತನಾಡಿದ ಡಿಎಸ್‌ಎಸ್ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಸ್ಸಿ, ಎಸ್ಟಿ ನೌಕರರಿಗೆ ಪದೋನ್ನತಿ ನೀಡುವಾಗ ಸಂವಿಧಾನದ ಶಾಸನಬದ್ಧವಾದ ಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಮಾಡದೇ ಅನ್ಯಾಯವೆಸಗುತ್ತಿದೆ ಎಂದು ದೂರಿದರು.
    ಶಾಸನಬದ್ಧ ಮೀಸಲಾತಿ ಜಾರಿಮಾಡದೇ ಅನ್ಯಾಯಗೊಳಿಸಿರುವ ಬಗ್ಗೆ ಬೆಂಗಳೂರು ಸಹಕಾರ ಸಂಘಗಳ ನಿಬಂಧಕರು ಹಾಗೂ ಮೈಸೂರು ಜಂಟಿ ನಿಬಂಧಕರು, ಜಿಲ್ಲಾ ಸಹಕಾರ ಸಂಘಕ್ಕೆ ಪತ್ರಮುಖೇನ ಕೂಲಂಕುಶವಾಗಿ ಪರಿಶೀಲಿಸಿ ವರದಿ ಸಲ್ಲಿಸಲು ತಿಳಿಸಿದ್ದರು. ಆದರೆ ಇದುವರೆಗೂ ಕಾರ್ಯನಿರ್ವಹಣಾಧಿಕಾರಿ, ಸಿಬ್ಬಂದಿ ಬ್ಯಾಂಕಿನ ಆಡಳಿತ ಮಂಡಳಿ ಗಮನಕ್ಕೆ ತಾರದೇ ಉz್ದೆÃಶಪೂರ್ವಕವಾಗಿ ವಿಷಯವನ್ನು ಮುಚ್ಚಿಟ್ಟು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ದೂರಿದರು.
    ಚಿಕ್ಕಮಗಳೂರು ಸಹಕಾರ ಬ್ಯಾಂಕಿನಲ್ಲಿ ಅವ್ಯವಹಾರದ ಬಗ್ಗೆ ರಾಜ್ಯ ಸಹಕಾರ ಸಂಘಗಳ ಅಧಿನಿಯಮ ೧೯೫೯ರ ಪ್ರಕರಣ ೬೪ ರಡಿ ವಿಚಾರಣೆ ನಡೆಯುತ್ತಿದೆ. ಈ ವಿಚಾರಣೆಯ ಆರೋಪ ೮ರಲ್ಲಿ ಬ್ಯಾಂಕಿನ ಸಿಬ್ಬಂದಿಗಳಿಗೆ ಮಾನವ ಸಂಪನ್ಮೂಲ ನಿಯಮ, ಜೇಷ್ಟತಾ ಪಟ್ಟಿಯನ್ನು ಉಲ್ಲಂಘಿಸಿ ಪದೋನ್ನತಿ ನೀಡಿ ವರ್ಗಾವಣೆ ಮಾಡುವ ಮೂಲಕ ಅವ್ಯವಹಾರ ನಡೆಸಿರುವುದು ಸ್ಪಷ್ಟವಾಗಿ ಕಂಡುಬರುತ್ತಿದೆ ಎಂದರು.
    ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಜಿಲ್ಲಾ ಸಹಕಾರ ಬ್ಯಾಂಕ್‌ಗೆ ಭೇಟಿ ನೀಡುವ ಮೂಲಕ ಪರಿಶಿಲನೆ ನಡೆಸಿ ಎಸ್ಸಿ, ಎಸ್ಟಿ ನೌಕರರಿಗೆ ಸಂವಿಧಾನದ ಶಾಸನಬದ್ಧವಾದ ಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಿ ಪದೋನ್ನತಿ ಕೊಡಿಸಿ ಸಾಮಾಜಿಕ ನ್ಯಾಯವನ್ನು ಒದಗಿಸಿಕೊಡಬೇಕು ಎಂದು ತಿಳಿಸಿದರು.
    ಮನವಿ ಸಲ್ಲಿಸುವ ಸಂದರ್ಭದಲ್ಲಿ ದಲಿತ ಮುಖಂಡರುಗಳಾದ ಹುಣಸೇಮಕ್ಕಿ ಲಕ್ಷö್ಮಣ್, ಹರೀಶ್ ಮಿತ್ರ, ಹರಿಯಪ್ಪ, ಜವರಯ್ಯ, ಈರಣ್ಣ, ಶಂಕರ್, ಶಿವಲಿಂಗಯ್ಯ, ವೀರಭದ್ರಯ್ಯ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts