ಮರ ಕಡಿಯಲು ಪರವಾನಗಿಗೆ ಲಂಚದ ಬೇಡಿಕೆ: ಲೋಕಾಯುಕ್ತ ಬಲೆಗೆ ಅರಣ್ಯಾಧಿಕಾರಿ

blank

ಬೈಂದೂರು: ಪಟ್ಟಾ ಸ್ಥಳದಲ್ಲಿದ್ದ ಹಲಸಿನ ಮರ ಕಡಿಯಲು ಪರವಾನಗಿಗೆ ಲಂಚದ ಬೇಡಿಕೆಯಿಟ್ಟ ಅಧಿಕಾರಿಗಳನ್ನು ಲೋಕಾಯುಕ್ತ ರು ಪೊಲೀಸರು ಬಂಧಿಸಿದ್ದಾರೆ.

ಬೈಂದೂರು ವಲಯ ಉಪವಲಯ ಅರಣ್ಯಾಧಿಕಾರಿ ಬಂಗಾರಪ್ಪ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾದರೆ, ಅರಣ್ಯ ವೀಕ್ಷಕ ವಿನಾಯಕ ತಪ್ಪಿಸಿಕೊಂಡಾತ.

ನಾಲ್ಕು ಸಾವಿರ ರೂ. ಬೇಡಿಕೆ

ಬೈಂದೂರು ತಾಲೂಕಿನ ಶಿರೂರು ನಿವಾಸಿ ಮಹಮ್ಮದ್ ಅನ್ವರ್ ಹಸನ್ ಎಂಬುವರ ಪಟ್ಟಾ ಸ್ಥಳದಲ್ಲಿದ್ದ ಹಲಸಿನ ಮರ ತೆರವುಗೊಳಿಸಲು ಅರಣ್ಯ ಇಲಾಖೆಯಿಂದ ಅನುಮತಿ ನೀಡುವ ಬಗ್ಗೆ ಇಲಾಖೆಗೆ ಅರ್ಜಿ ನೀಡಿದ್ದು, ಪರವಾನಿಗೆ ನೀಡಲು ನಾಲ್ಕು ಸಾವಿರ ರೂ.ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ಮಹಮ್ಮದ್ ಅನ್ವರ್ ಹಸನ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ರೆಡ್‌ಹ್ಯಾಂಡ್ ಆಗಿ ಹಿಡಿದ ಲೋಕಾಯುಕ್ತ ಅಧಿಕಾರಿಗಳು

ದೂರಿನ ಆಧಾರದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಹಣದ ಸಮೇತ ಆರೋಪಿ ಬಂಗಾರಪ್ಪನನ್ನು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದಾರೆ. ಮಂಗಳೂರು ವಿಭಾಗ ಲೋಕಾಯುಕ್ತ ಪೊಲೀಸ್ ಅಧಿಕ್ಷಕ ನಟರಾಜ್ ಎಂ.ಎ.ಮಾರ್ಗದರ್ಶನದಲ್ಲಿ ಉಡುಪಿ ಲೋಕಾಯುಕ್ತ ಡಿವೈಎಸ್ಪಿ ಪ್ರಕಾಶ್ ಕೆ.ಸಿ.ಹಾಗೂ ಕರ್ನಾಟಕ ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಮಂಜುನಾಥ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ತಂಡದಲ್ಲಿ ಸಿಬ್ಬಂದಿ ನಾಗೇಶ್ ಉಡುಪ, ನಾಗರಾಜ್, ರೋಹಿತ್, ಮಲ್ಲಿಕಾ, ಪುಷ್ಪಾವತಿ, ಸತೀಶ್ ಹಂದಾಡಿ, ರವೀಂದ್ರ ಗಾಣಿಗ, ರಮೇಶ್, ಅಬ್ದುಲ್ ಜಲಾಲ್, ಪ್ರಸನ್ನ ದೇವಾಡಿಗ, ಸತೀಶ್ ಆಚಾರ್ಯ, ರಾಘವೇಂದ್ರ ಹೊಸಕೋಟಿ, ಸೂರಜ್ ಹಾಗೂ ಸುಧೀರ್ ಪಾಲ್ಗೊಂಡಿದ್ದರು.

Share This Article

ಈ ನಾಲ್ವರೊಂದಿಗೆ ನೀವು ಎಂದಿಗೂ ಜಗಳವಾಡಬೇಡಿ; ಅದರಿಂದ ನಿಮಗೆ ಹಾನಿ | Chanakya Niti

ಆಚಾರ್ಯ ಚಾಣಕ್ಯ ತನ್ನ ಒಂದು ನೀತಿಯ ಮೂಲಕ ಮಾನವನಿಗೆ ತನ್ನ ಜೀವನವನ್ನು ನಡೆಸುವ ಮಾರ್ಗವನ್ನು ಹೇಳಿದ್ದಾರೆ.…

ಬೊಜ್ಜು ಕರಗಿಸಿ ಫಿಟ್​ ಆಗಿರಲು ಈ ತರಕಾರಿಗಳೇ ಸಾಕು; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಇಂದಿನ ಕಾರ್ಯನಿರತ ಜೀವನದಲ್ಲಿ ತೂಕ ಹೆಚ್ಚಾಗುವುದು ತುಂಬಾ ಸಾಮಾನ್ಯ ಸಮಸ್ಯೆಯಾಗಿದೆ. ಅನೇಕರು ಹೆಚ್ಚಿದ ತೂಕದ ಬಗ್ಗೆ…

ಡಯಟ್ ಸೋಡಾ ಕುಡಿಯಲು ಇಷ್ಟಪಡುತ್ತೀರಾ?; ಹಾಗಾದ್ರೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ ಇದು.. | Health Tips

ನಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸುವ ಜನರು ಸಾಮಾನ್ಯ ಸೋಡಾಕ್ಕಿಂತ ಡಯಟ್ ಸೋಡಾ ಕುಡಿಯಲು…