More

    ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ

    ರಿಪ್ಪನ್​ಪೇಟೆ: ಸಮೀಪದ ಸೂಡೂರು ಅರಣ್ಯ ಪ್ರದೇಶದಲ್ಲಿ ಶಿವಮೊಗ್ಗದ ಜೆಎನ್​ಎನ್​ಸಿಇ ದ್ವಿತೀಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನ ಶವ ನೇಣುಬಿಗಿದ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ. ಹಾರೋಹಿತ್ತಲು ಗ್ರಾಮದ ಯೋಗೇಂದ್ರ ಎಂಬುವರ ಪುತ್ರ ಅರುಣ್​ಕುಮಾರ್ (18) ಮೃತ ವಿದ್ಯಾರ್ಥಿ. ಶಿವಮೊಗ್ಗದಲ್ಲಿ ತಾಂತ್ರಿಕ ಶಿಕ್ಷಣ ವಿದ್ಯಾರ್ಥಿಯಾಗಿ 2ನೇ ಸೆಮಿಸ್ಟರ್​ನಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ ಶಿವಮೊಗ್ಗದ ಟ್ಯಾಂಕ್​ವೊಹಲ್ಲಾದಲ್ಲಿರುವ ಯಲ್ಲಮ್ಮ ದಾಸಪ್ಪ ವಿದ್ಯಾರ್ಥಿನಿಲಯದಲ್ಲಿ ವಾಸ್ತವ್ಯ ಹೂಡಿದ್ದನು. ಮನೆಯವರು ದೂರವಾಣಿ ಕರೆ ಮಾಡಿದರೂ ಉತ್ತರಿಸದ ಅರುಣ್​ಕುಮಾರ್, ಕಾಲೇಜಿಗೂ ಬಂದಿರಲಿಲ್ಲ. ಈ ಬಗ್ಗೆ ಹಾಸ್ಟೆಲ್​ನಲ್ಲಿ ವಿಚಾರಿಸಿದಾಗ ಆತ ಹಾಸ್ಟೆಲ್​ಗೂ ಎರಡು ದಿನಗಳಿಂದ ಬಂದಿರಲಿಲ್ಲ ಎಂಬ ಮಾಹಿತಿ ತಿಳಿದಿದೆ. ಈ ಹಿನ್ನೆಲೆಯಲ್ಲಿ ಪಾಲಕರು ಕೊಲೆ ಶಂಕೆ ವ್ಯಕ್ತಪಡಿಸಿ ಶಿವಮೊಗ್ಗ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ಮೊಬೈಲ್ ಜಾಡು ಹಿಡಿದು ಹೊರಟ ಪೊಲೀಸರಿಗೆ ಶೆಟ್ಟಿಕೆರೆ-ಬಸವಾಪುರ ನಡುವಿನ ಸೂಡೂರು ಅರಣ್ಯ ಪ್ರದೇಶದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವಪತ್ತೆಯಾಗಿದೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts