More

    ರಾಜ್ಯ ಪ್ರವಾಸದತ್ತ ಬಿಎಸ್​​ವೈ ಚಿತ್ತ… ಪಕ್ಷ ಸಂಘಟನೆಗೆ ಮುಂದಾದ ಮಾಜಿ ಸಿಎಂ

    ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿರುವ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ, ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ.

    ರಾಜ್ಯ ಸುತ್ತಲು ರೆಡಿಯಾಗಿರುವ ಬಿಎಸ್​ವೈ, ಇದಕ್ಕಾಗಿ ವಿಶೇಷ ವಾಹನ ಸಿದ್ದಪಡಿಸಲು ಆಪ್ತರಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ ಗೌರಿ-ಗಣೇಶ ಹಬ್ಬದ ನಂತರ ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿವೆ. ಇದನ್ನೂ ಓದಿರಿ ದೆಹಲಿ ಪೊಲೀಸರ ಭರ್ಜರಿ ಬೇಟೆ: ಲೇಡಿ ಡಾನ್ ಸೇರಿದಂತೆ ಇಬ್ಬರು ಗ್ಯಾಂಗ್​​ಸ್ಟರ್​​​​ ಬಂಧನ

    ಅಧಿಕಾರದಿಂದ ಕೆಳಗಿಳಿಯುತ್ತಲೇ ಪಕ್ಷ ಸಂಘಟನೆ ಕಡೆ ಗಮನ ಹರಿಸಿರುವ ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯ ಪ್ರವಾಸಕ್ಕೂ ಮೊದಲು ಒಂದು ವಾರ ಪ್ರವಾಸಿ ತಾಣದಲ್ಲಿ ಕುಟುಂಬದವರ ಜೊತೆ ಕಾಲ ಕಳೆಯಲಿದ್ದಾರೆ. ಜೊತೆಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಫಿಟ್​​ ಅಂಡ್ ಫೈನ್ ಆಗಲು ತಯಾರಿ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts