ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ.
ರಾಜ್ಯ ಸುತ್ತಲು ರೆಡಿಯಾಗಿರುವ ಬಿಎಸ್ವೈ, ಇದಕ್ಕಾಗಿ ವಿಶೇಷ ವಾಹನ ಸಿದ್ದಪಡಿಸಲು ಆಪ್ತರಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ ಗೌರಿ-ಗಣೇಶ ಹಬ್ಬದ ನಂತರ ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿವೆ. ಇದನ್ನೂ ಓದಿರಿ ದೆಹಲಿ ಪೊಲೀಸರ ಭರ್ಜರಿ ಬೇಟೆ: ಲೇಡಿ ಡಾನ್ ಸೇರಿದಂತೆ ಇಬ್ಬರು ಗ್ಯಾಂಗ್ಸ್ಟರ್ ಬಂಧನ
ಅಧಿಕಾರದಿಂದ ಕೆಳಗಿಳಿಯುತ್ತಲೇ ಪಕ್ಷ ಸಂಘಟನೆ ಕಡೆ ಗಮನ ಹರಿಸಿರುವ ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯ ಪ್ರವಾಸಕ್ಕೂ ಮೊದಲು ಒಂದು ವಾರ ಪ್ರವಾಸಿ ತಾಣದಲ್ಲಿ ಕುಟುಂಬದವರ ಜೊತೆ ಕಾಲ ಕಳೆಯಲಿದ್ದಾರೆ. ಜೊತೆಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಫಿಟ್ ಅಂಡ್ ಫೈನ್ ಆಗಲು ತಯಾರಿ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ.