More

    ಈ ಸಲದ ದಸರಾ ಉದ್ಘಾಟಿಸಲಿದ್ದಾರೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ..

    ಬೆಂಗಳೂರು: ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಯಾರು ಉದ್ಘಾಟಿಸುತ್ತಾರೆ, ಮಹತ್ವದ ಹಬ್ಬಕ್ಕೆ ಯಾರು ಚಾಲನೆ ನೀಡುತ್ತಾರೆ ಎಂಬುದೇ ಪ್ರತಿವರ್ಷದ ಒಂದು ದೊಡ್ಡ ಕುತೂಹಲ. ಈ ಬಾರಿಯ ಅಂಥದ್ದೊಂದು ಕುತೂಹಲಕ್ಕೆ ತೆರೆ ಬಿದ್ದಿದೆ.

    ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ ಎಸ್​.ಎಂ. ಕೃಷ್ಣ ಅವರು ಈ ಸಲದ ನಾಡಹಬ್ಬ ದಸರೆಗೆ ಚಾಲನೆ ನೀಡಲಿದ್ದಾರೆ. ಮಾತ್ರವಲ್ಲ ಈ ಕುರಿತು ಇದೀಗ ಅಧಿಕೃತ ಮಾಹಿತಿಯೇ ಹೊರಬಿದ್ದಿದೆ. ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಈ ವಿಷಯ ಖಚಿತಪಡಿಸಿದ್ದಾರೆ.

    ಇದನ್ನೂ ಓದಿ: ಟೋ ಮಾಡಿದ ವಾಹನ ಬಿಡಲು ಲಂಚ ಕೇಳಿದ ಪೊಲೀಸ್; ದೂರಿನ ಮೇರೆಗೆ ಠಾಣೆ ಮೇಲೆ ದಾಳಿ ಮಾಡಿದ ಎಸಿಬಿ

    ಅಕ್ಟೋಬರ್ 7ರಿಂದ ಆರಂಭವಾಗಲಿರುವ ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಹಿರಿಯ ಮುತ್ಸದ್ಧಿ, ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ಅವರಿಗೆ ಆಹ್ವಾನ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ದಸರಾ ಹಬ್ಬದ ಸಿದ್ಧತೆ ಕುರಿತು ಚರ್ಚಿಸಲು ಇಂದು ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

    ಭಾರತೀಯರ ಮನೆಯಲ್ಲೇಕೆ ಇಂಥದ್ದೊಂದು ಇರಲು ಸಾಧ್ಯವಿಲ್ಲ?; ಹೀಗೆಂದ ಕೆಲವೇ ಗಂಟೆಗಳಲ್ಲಿ ಸರಸ್ವತಿ ಟ್ರೆಂಡಿಂಗ್

    ಕುಡುಕರ ಸೋಗಲ್ಲಿ ಹೋಗಿ ಆರೋಪಿಯನ್ನು ಬಂಧಿಸಿದ ಪೊಲೀಸ್; ಕೊನೆಗೂ 9 ವರ್ಷಗಳ ಬಳಿಕ ಸಿಕ್ಕಿಬಿದ್ದ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts