More

    ಗೌರವ ಡಾಕ್ಟರೇಟ್​​​ಗೆ ಪಾತ್ರರಾದ ಮಾಜಿ ಸಿಎಂ ಯಡಿಯೂರಪ್ಪ: ನಾಳೆಯೇ ಪದವಿ ಪ್ರದಾನ

    ಶಿವಮೊಗ್ಗ: ಬಿಜೆಪಿಯ ಸಂಸದೀಯ ಮಂಡಳಿಯ ಸದಸ್ಯರಾಗಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಗೌರವ ಡಾಕ್ಟರೇಟ್​​​ಗೆ ಪಾತ್ರರಾಗಿದ್ದಾರೆ.

    ಇದನ್ನೂ ಓದಿ: 20 ರೂ.ಗೆ ಊಟ ಮತ್ತು 50 ರೂ.ಗೆ ಸ್ನಾಕ್ಸ್​​​: ಸಾಮಾನ್ಯ ರೈಲು ಪ್ರಯಾಣಿಕರಿಗೂ ಶೀಘ್ರದಲ್ಲೇ ಆಹಾರ ವ್ಯವಸ್ಥೆ

    ಶಿವಮೊಗ್ಗದ ಸಾಗರ ತಾಲೂಕಿನ ಇರುವಕ್ಕಿ ಬಳಿ ಇರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದಿಂದ ಮಾಜಿ ಸಿಎಂಗೆ ಗೌರವ ಡಾಕ್ಟರೇಟ್​​​ ಘೋಷಣೆ ಮಾಡಲಾಗಿದ್ದು, ಕುಲಪತಿ ಡಾ ಆರ್​​.ಸಿ. ಜಗದೀಶ್ ಈ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ.

    ಈ ಸಮಾರಂಭದಲ್ಲಿ ಮೊದಲ ಬಾರಿಗೆ ಕೃಷಿಗೆ ಪ್ರತ್ಯೇಕ ಬಜೆಟ್ ಮಂಡಿಸಿದ್ದ ಮಾಜಿ ಸಿಎಂ ಬಿಎಸ್​​ವೈ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದು, ನಾಳೆ ಸಂಜೆ ನಡೆಯಲಿರುವ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ.

    ಇದನ್ನೂ ಓದಿ: ಕಸದ ತೊಟ್ಟಿಯಿಂದ ಗ್ರಾಹಕರಿಗೆ ಸ್ನಾಕ್ಸ್​​ ನೀಡಿದ ಮಹಿಳೆ: ಘಟನೆ ಬೆಳಕಿಗೆ ಬಂದಿದ್ದು ಹೀಗೆ..

    ಸುದೀರ್ಘ ರಾಜಕೀಯ ಅನುಭವವಿರುವ ಹಿರಿಯ ಮುತ್ಸದ್ಧಿ, ಧೀಮಂತ ನಾಯಕ, ರೈತಬಂಧುಗೆ ಡಾಕ್ಟರೇಟ್‌ಗೆ ಭಾಜನರಾಗಿದ್ದು, ರಾಜ್ಯ ಬಿಜೆಪಿಯು ಟ್ವೀಟ್​​ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದೆ. ಈಗಾಗಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿರುವ ಮಾಜಿ ಸಿಎಂ ಬಿಎಸ್​​ವೈ, ರಾಜ್ಯ ಬಿಜೆಪಿಗೆ ಬೆನ್ನೆಲುಬಾಗಿ ನಿಲ್ಲುತ್ತೇನೆ ಎಂದು ತಿಳಿಸಿದ್ದರು.(ಏಜೆನ್ಸೀಸ್​​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts