ಚೆನ್ನೈ: ನಿನ್ನೆ (ಮೇ.24) ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಕ್ವಾಲಿಫೈರ್ 2 ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ರೋಚಕ ಪಂದ್ಯದಲ್ಲಿ ಅಂತಿಮವಾಗಿ ಪ್ಯಾಟ್ ಕಮ್ಮಿನ್ಸ್ ಪಡೆ 36 ರನ್ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಫೈನಲ್ಗೆ ಲಗ್ಗೆಯಿಟ್ಟ ಎಸ್ಆರ್ಎಚ್, ಮತ್ತೊಮ್ಮೆ ಕೆಕೆಆರ್ ಜತೆಗೆ ಅಂತಿಮ ಹಣಾಹಣಿಯಲ್ಲಿ ಮುಖಾಮುಖಿಯಾಗಲಿದೆ.
ಇದನ್ನೂ ಓದಿ: ರಾಜಸ್ಥಾನ್ ಮಣಿಸಿ ಫೈನಲ್ಗೇರಿದ ಸನ್ರೈಸರ್ಸ್; ಫೈನಲ್ನಲ್ಲಿ ಕೆಕೆಆರ್ ವಿರುದ್ಧ ಕಣಕ್ಕೆ
ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಆರ್ಆರ್, ಎಸ್ಆರ್ಎಚ್ಗೆ ಬ್ಯಾಟ್ ಮಾಡುವಂತೆ ತಿಳಿಸಿತು. ಅದರಂತೆಯೇ ಕಣಕ್ಕಿಳಿದ ಸನ್ರೈಸರ್ಸ್ ಬ್ಯಾಟ್ಸ್ಮನ್ಗಳು 20 ಓವರ್ಗಳಲ್ಲಿ 175 ರನ್ ಕಲೆಹಾಕುವಲ್ಲಿ ಮಾತ್ರ ಶಕ್ತವಾಯಿತು. ಕಮ್ಮಿನ್ಸ್ ಪಡೆ ನೀಡಿದ ಈ ಸಾಧಾರಣ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ ಪಡೆ ಉತ್ತಮ ಆರಂಭ ಪಡೆದರೂ ಸಹ ಗೆಲುವು ದಾಖಲಿಸುವಲ್ಲಿ ವಿಫಲವಾಯಿತು. 36 ರನ್ಗಳಿಂದ ಹೀನಾಯ ಸೋಲು ಕಂಡ ಆರ್ಆರ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ, ಅಸಮಾಧಾನಗಳು ವ್ಯಕ್ತವಾಗಿವೆ. ಈ ಬೆನ್ನಲ್ಲೇ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಕೂಡ ಸೋಲಿನ ಕುರಿತು ವ್ಯಂಗ್ಯವಾಡಿದ್ದಾರೆ.
ಐಪಿಎಲ್ 17ನೇ ಸೀಸನ್ನಲ್ಲಿ ರಾಜಸ್ಥಾನ ರಾಯಲ್ಸ್ ಪರ ಆರಂಭದಿಂದಲೂ ಆಕರ್ಷಕ ಬ್ಯಾಟಿಂಗ್ ಮಾಡಿದ ಕ್ಯಾಪ್ಟನ್ ಸಂಜು ಸ್ಯಾಮ್ಸನ್ ಮತ್ತು ರಿಯಾನ್ ಪರಾಗ್ ಲೀಗ್ ಅಂತ್ಯದ ವೇಳೆಗೆ ಇಬ್ಬರೂ ತಲಾ 500 ರನ್ ಕಲೆಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಸಂಜು ಮತ್ತು ಪರಾಗ್ಗೆ ಖುಷಿ ನೀಡಿದ್ದೇ ಆದ್ರೂ, ಭಾರತ ಕ್ರಿಕೆಟ್ ತಂಡದ ಹಿರಿಯ ಮಾಜಿ ಆಟಗಾರ ಸುನಿಲ್ ಗವಾಸ್ಕರ್ಗೆ ಭಾರೀ ಅಸಮಾಧಾನ ಮೂಡಿಸಿದೆ. ನಾಯಕನಾದ ಸ್ಯಾಮ್ಸನ್ ತಮ್ಮ ಖಾತೆಗೆ ಹೆಚ್ಚುವರಿ ರನ್ ಸೇರಿಸಿಕೊಂಡರು. ಆದರೆ, ತಂಡಕ್ಕೆ ಒಂದು ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಾಗಲಿಲ್ಲ ಅಂದಮೇಲೆ ಅದನ್ನು ಗಳಿಸಿ ಏನು ಪ್ರಯೋಜನ? ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ನಾನೇ ನಾಯಕ, ನಾನೇ ಖಳನಾಯಕ ; ಹುಟ್ಟುಹಬ್ಬದ ಸಂಭ್ರಮದಲ್ಲಿ ಸ್ಯಾಂಡಲ್ವುಡ್ ಕ್ಷೇತ್ರಪತಿ ನವೀನ್ ಶಂಕರ್
“ಸನ್ರೈಸರ್ಸ್ ಬ್ಯಾಟ್ಸ್ಮನ್ಗಳು ಆಕರ್ಷಕ ಬ್ಯಾಟಿಂಗ್ ಮಾಡಿ ಪೆವಿಲಿಯನ್ನತ್ತ ಮುಖಮಾಡಿದರು. ಆದ್ರೆ, ನೀವು ಗಳಿಸಿದ 500 ರನ್ ಏನು ಪ್ರಯೋಜನ? ನಿಮ್ಮ ಫ್ರಾಂಚೈಸಿಗೆ ಒಂದೇ ಒಂದು ಪಂದ್ಯ ಗೆಲ್ಲಿಸಿಕೊಡಲು ನಿಮ್ಮಿಂದ ಆಗಲಿಲ್ಲ ಅಂದಮೇಲೆ, ಈ ಬೃಹತ್ ರನ್ ಲೆಕ್ಕಕ್ಕಿಲ್ಲ ಎಂದೇ ಅರ್ಥ. ಇದೇ ಕಾರಣಕ್ಕೆ, ಸ್ಯಾಮ್ಸನ್ ಇಂದಿಗೂ ಟೀಂ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಭದ್ರವಾಗಿಸಿಕೊಳ್ಳಲು ಸಾಧ್ಯವಾಗಿಲ್ಲ. ಉತ್ತಮ ಶಾಟ್ ಸೆಲೆಕ್ಷನ್ ಇಲ್ಲದ ಸಂಜು, ಮುಂದಿನ ದಿನಗಳಲ್ಲಿ ಇದನ್ನು ಸರಿಯಾಗಿ ಅರಿತು, ಐಸಿಸಿ ವಿಶ್ವಕಪ್ ಟಿ20 ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲಿ ಎಂದು ನಾನು ಆಶಿಸುತ್ತೇನೆ” ಎಂದಿದ್ದಾರೆ,(ಏಜೆನ್ಸೀಸ್).
ಮುಂದಿನ ವರ್ಷ ಈ 4 ಸ್ಟಾರ್ ಆಟಗಾರರನ್ನು ಕೈಬಿಡಲಿದೆ ಆರ್ಸಿಬಿ ಫ್ರಾಂಚೈಸಿ! ಫ್ಯಾನ್ಸ್ ಕಂಗಾಲು
ಇವರಿಬ್ಬರಿಲ್ಲ ಅಂದ್ರೆ IPLಗೆ ಕಳೆಯೇ ಇಲ್ಲ! ಮುಂದೆ ಯಾರೂ ಹೀಗೆ ಹುಚ್ಚೆದ್ದು ನೋಡೋದಿಲ್ಲ: ನವಜೋತ್ ಸಿಂಗ್ ಸಿಧು