More

    ರಾಜಕೀಯ ಸೇರಿದ ಬೆನ್ನಲ್ಲೇ ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈಗೆ ಬಿಜೆಪಿಯಲ್ಲಿ ಉನ್ನತ ಸ್ಥಾನ

    ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷರನ್ನಾಗಿ ಶನಿವಾರ ನೇಮಿಸಲಾಗಿದೆ. ರಾಜ್ಯ ಘಟಕದ ಅಧ್ಯಕ್ಷ ಎಲ್. ಮುರುಗನ್ ಈ ನೇಮಕ ಮಾಡಿದ್ದಾರೆ.

    2011ರ ಕರ್ನಾಟಕ ಕೇಡರ್​ನ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರು ಮಂಗಳವಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ. ಮುರಳಿಧರ್​ ರಾವ್​ ಹಾಗೂ ಎಲ್​. ಮುರುಗನ್​ ಸಮ್ಮುಖದಲ್ಲಿ ಪಕ್ಷ ಸೇರಿದ್ದರು.

    ಇದನ್ನೂ ಓದಿ: ಬಣ್ಣದ ಲೋಕಕ್ಕೆ ನಶೆ ನಂಜು: ಕನ್ನಡ ಚಲನಚಿತ್ರರಂಗದಲ್ಲಿ ಬೇರು ಬಿಟ್ಟಿರುವ ಡ್ರಗ್ಸ್ ವಿಕೃತಿ

    ಶನಿವಾರ ಪತ್ರಿಕಾ ಪ್ರಕಟಣೆ ಹೊರಡಿಸಿದ ಎಲ್​. ಮುರುಗನ್, ಮಾಜಿ ಐಪಿಎಸ್​ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಮುಂದಿನ ಅವರ ಭವಿಷ್ಯ ಯಶಸ್ವಿಯಾಗಿರಲಿ ಎಂದು ಶುಭ ಹಾರೈಸಿದ್ದರು. ​

    ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ಅವರು ಪೊಲೀಸ್ ಸೇವೆಗೆ ರಾಜೀನಾಮೆ ನೀಡಿದ್ದರು. ತಮಿಳುನಾಡಿನ ಕರೂರು ಜಿಲ್ಲೆಯ ಕೃಷಿ ಕುಟುಂಬದವರಾದ ಅಣ್ಣಾಮಲೈ, ಮೆಕಾನಿಕಲ್ ಇಂಜಿನಿಯರಿಂಗ್ ಹಾಗೂ ಐಐಎಂ ಲಖನೌನಿಂದ ಎಂಬಿಎ ಪದವಿಗಳಿಸಿದ್ದಾರೆ. ನಂತರ ನಾಗರೀಕ ಸೇವೆಗೆ ಸೇರಿದ್ದರು. (ಏಜೆನ್ಸೀಸ್​)

    ಕೇಂದ್ರ ಸರ್ಕಾರದ ನಿರ್ಣಯದಿಂದ ಫುಲ್​ ಖುಷಿಯಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts