ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಮುಂಬರುವ ತಮಿಳುನಾಡು ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.
ಭಾನುವಾರ ಸಂಜೆ ಅವರು ಫೇಸ್ಬುಕ್ ಲೈವ್ನಲ್ಲಿ ಚುನಾವಣೆಗೆ ನಿಲ್ಲುವುದಾಗಿ ಘೋಷಿಸಿದ್ದಾರೆ.
ತಮಿಳುನಾಡಿನಲ್ಲಿ ಏಪ್ರಿಲ್ 2021 ಚುನಾವಣೆ ನಡೆಯಲಿದೆ. ಇದಕ್ಕಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ. ಅಣ್ಣಾ ಮಲೈ ಅವರು ಬಿಜೆಪಿಯಿಂದ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.
ಅಣ್ಣಾಮಲೈ ಅವರು ಕರ್ನಾಟಕದ ಅತ್ಯಂತ ಸೂಕ್ಷ್ಮವಾದ ಚಿಕ್ಕಮಗಳೂರು ಹಾಗೂ ಉಡುಪಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿ ಹಾಗೂ ಬೆಂಗಳೂರು ದಕ್ಷಿಣ ವಲಯದ ಡಿಸಿಪಿಯಾಗಿ ಉತ್ತಮ ಸೇವೆ ಸಲ್ಲಿಸಿದ್ದರು.
ಕಳೆದ ವರ್ಷ ವಯಕ್ತಿಕ ಕಾರಣಗಳಿಂದ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಈಗ ಚುನಾವಣೆಗೆ ನಿಲ್ಲುವುದಾಗಿ ಘೋಷಿಸಿದ್ದಾರೆ.
ಇದನ್ನೂ ಓದಿ ಈ ಫಾದರ್ ಚರ್ಚ್ಗೆ ಬರೋರನ್ನ ಶೂಟ್ ಮಾಡ್ತಾರೆ…!
ಫೇಸ್ ಬುಕ್ನಲ್ಲಿ ‘ಮಿಸ್ ಯೂ ಕರ್ನಾಟಕ’ ಎಂದು ಕನ್ನಡಿಗರ ಬಗ್ಗೆ ಅಭಿಮಾನ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಸೇವೆಯಲ್ಲಿದ್ದಾಗ ಕನ್ನಡಿಗರು ಬೆಟ್ಟದಷ್ಟು ಪ್ರೀತಿ ಕೊಟ್ಟರು. ನಿಮ್ಮ ಪ್ರೀತಿಗೆ ನಾನು ಋಣಿ. ನನಗೆ ಜನರೊಂದಿಗೆ ಇದ್ದು ರಾಜಕೀಯ ಸುಧಾರಣೆ ಮಾಡುವ ಆಲೋಚನೆ ಇದೆ. ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ನನ್ನೂರಿಗೆ ಬಂದಿದ್ದೇನೆ. ಜನರ ಸೇವೆ ಮಾಡಲಿದ್ದೇನೆ ಎಂದರು.
ನನ್ನ ಮುಂದಿನ ಆಲೋಚನೆ ಕುಟುಂಬದ ಜತೆ ಸಮಯ ಕಳೆಯುವುದು, ತಮಿಳುನಾಡು ರಾಜಕೀಯಕ್ಕೆ ಪ್ರವೇಶ ಮಾಡಬೇಕು. ಜನರ ಸೇವೆ ಮಾಡಬೇಕು. ರಾಜಕೀಯ ವ್ಯವಸ್ಥೆ ಬದಲಾಯಿಸಬೇಕು. ಪೊಲೀಸ್ ಅಧಿಕಾರಿಗಳಿ ಉತ್ತಮ ವಾತಾವರಣ ಕಲ್ಪಿಸಬೇಕು ಎಂದು ಹೇಳಿಕೊಂಡರು.