ಮೈಸೂರು: ಪಕ್ಷದಲ್ಲಿ 20ರಿಂದ 30 ವರ್ಷ ಸೇವೆ ಸಲ್ಲಿಸಿದವರು ಈಗ ಪಕ್ಷ ಬಿಟ್ಟು ಹೋಗುತ್ತಿದ್ದಾರೆ. ಪಕ್ಷಾಂತರ ಕೇವಲ ಕಾಂಗ್ರೆಸ್ನಲ್ಲಿ ಮಾತ್ರ ಅಲ್ಲ ಎಲ್ಲ ಪಕ್ಷಗಳಲ್ಲೂ ಇದೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.
ಮೈಸೂರು ಭಾಗದಲ್ಲಿ ಚುನಾವಣೆಗೂ ಮೊದಲು ಕೆಲವು ನಾಯಕರು ಪಕ್ಷ ಬಿಡುವುದಿಲ್ಲ ಎಂದು ಹೇಳಿದ್ದರು. ಈಗ ನೋಡಿ ಏನಾಗಿದೆ ಎಂದು ಮಾಜಿ ಶಾಸಕ ಎಚ್.ವಿಶ್ವನಾಥ್ ಅವರನ್ನು ಪರೋಕ್ಷವಾಗಿ ಟೀಕಿಸಿದರು.
ಮಾಧ್ಯಮಗಳಲ್ಲೂ ಈಗ ರಾಜಕಾರಣಿಗಳಾಗಿದ್ದಾರೆ. ಬೇರೆ ಕ್ಷೇತ್ರದಂತೆ ಮಾಧ್ಯಮ ಕ್ಷೇತ್ರ ಕೂಡ ಹೆಸರುಕೆಡಿಸಿಕೊಂಡಿದೆ. ನಮ್ಮ ನೆರಳನ್ನು ನಾವೇ ನಂಬದಂತಹ ಸ್ಥಿತಿ ಎದುರಾಗಿದೆ ಎಂದು ಅವರು ಹೇಳಿದರು.
ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ನಾನು ಲಾಬಿ ಮಾಡುತ್ತಿಲ್ಲ. ಹೈಕಮಾಂಡ್ ಸೂಚಿಸುವ ವ್ಯಕ್ತಿ ಅಧ್ಯಕ್ಷರಾಗುತ್ತಾರೆ. ನಾನು ಕೇವಲ ಕಾಂಗ್ರೆಸ್ ಕಾರ್ಯಕರ್ತ ಎಂದು ಅವರು ಹೇಳಿದರು.
ಬಿಜೆಪಿಯಲ್ಲಿ ಹೊಸಬರ ಆಡಳಿತ: ಬಿಜೆಪಿಯಲ್ಲಿ ಹೊಸಬರು ಆಡಳಿತ ನಡೆಸುತ್ತಿದ್ದಾರೆ. ಹಳಬರು ಇದನ್ನು ನೋಡುತ್ತಾ ಕುಳಿತಿದ್ದಾರೆ. ಹಳಬರಿಂದ ಬಿಜೆಪಿಯಲ್ಲಿ ಬದಲಾವಣೆಯ ಪರ್ವ ಸಂಭವಿಸಲಿದೆ ಕಾದು ನೋಡುತ್ತಿರಿ ಎಂದು ಬಾಂಬ್ ಸಿಡಿಸಿದರು. (ದಿಗ್ವಿಜಯ ನ್ಯೂಸ್)