More

    ಬಿಜೆಪಿಯವರಿಗೆ ಸಂವಿಧಾನ ಮುಖ್ಯವಲ್ಲ, ನಾಗ್ಪುರದ ಆರ್‌ಎಸ್‌ಎಸ್ ಕಚೇರಿಗೆ ವಿಧೇಯರಾಗಿದ್ದಾರೆ

    ಮೈಸೂರು: ಬಿಜೆಪಿಯವರಿಂದ ಪ್ರಜಾಪ್ರಭುತ್ವದ ನಾಶ ಆಗುತ್ತಿದೆ. ಅವರಿಗೆ ಸಂವಿಧಾನ ಮುಖ್ಯವಲ್ಲ. ನಾಗ್ಪುರದ ಆರ್‌ಎಸ್‌ಎಸ್ ಕಚೇರಿಗೆ ವಿಧೇಯರಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಆರೋಪ ಮಾಡಿದ್ದಾರೆ.

    ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜನರ ಸಮಸ್ಯೆಗಳನ್ನು ಬಗೆಹರಿಸಲು ಕೇಂದ್ರ, ರಾಜ್ಯ ಸರ್ಕಾರಗಳು ಪ್ರಯತ್ನ ಮಾಡಿಲ್ಲ. ಕೋಮು ಸೌಹಾರ್ದತೆ ಹಾಳು ಮಾಡಿ ರಾಜಕೀಯ ಲಾಭ ಮಾಡುತ್ತಿದ್ದಾರೆ. ಇದನ್ನು ಖಂಡಿಸಿ ಕಾಂಗ್ರೆಸ್​ ಪಕ್ಷ ಭಾರತ್ ಜೋಡೋ ಯಾತ್ರೆ ಮಾಡುತ್ತಿದೆ ಎಂದರು.

    ಕೋಲಾರದಲ್ಲಿ ದೇವರ ಕೋಲು ಮುಟ್ಟಿದ್ದಕ್ಕೆ ಹಲ್ಲೆ ವಿಚಾರವನ್ನು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಖಂಡಿಸಿದ್ದಾರೆ. ಅಸ್ಪೃಶ್ಯತೆ ಆಚರಣೆ ಇನ್ನೂ ಜೀವಂತವಾಗಿರುವುದು ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಕೆ.ಎಸ್.ಈಶ್ವರಪ್ಪ ಮೀಸಲಾತಿ ಇನ್ನೂ ಎಷ್ಟು ವರ್ಷ ಬೇಕು ಅಂತ ಕೇಳಿದ್ದಾರೆ. ಮೀಸಲಾತಿಯ ಚಾರಿತ್ರಿಕ ಹಿನ್ನೆಲೆಯನ್ನೇ ಅವರು ಅರ್ಥ ಮಾಡಿಕೊಂಡಿಲ್ಲ. ಗೋವಿಂದ ಕಾರಜೋಳ ಸೇರಿದಂತೆ ಅವರ ಪಾರ್ಟಿಯಲ್ಲೂ ಬೇಕಾದಷ್ಟು ನಾಯಕರು ಇದ್ದಾರೆ. ಅವರನ್ನು ಯಾಕೆ ಇರಿಸಿಕೊಂಡಿದ್ದಾರೆ ಎಂದು ಪ್ರಶ್ನೆ ಮಾಡಿದರು.

    ಹಿಜಾಬ್​ ವಿರುದ್ಧದ ಪ್ರತಿಭಟನೆಗೆ ಬೆಚ್ಚಿಬಿದ್ದ ಇರಾನ್​:ಮುಸ್ಲಿಂ ರಾಷ್ಟ್ರ ಧಗಧಗ- ಏಳು ಮಂದಿ ಸಾವು, ಇಂಟರ್​ನೆಟ್​ ಸ್ಥಗಿತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts