More

    ಮಾಜಿ ಸಚಿವ ಜನಾರ್ದನ ರೆಡ್ಡಿಯವರಿಗೆ ಕರೊನಾ ಸೋಂಕು; ಸಚಿವ ಶ್ರೀರಾಮುಲು ಮನೆ ಭೇಟಿ ರದ್ದು

    ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಲ್ಲಿ ಕರೊನಾ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಈ ಬಗ್ಗೆ ಜನಾರ್ದನ ರೆಡ್ಡಿಯವರು ತಮ್ಮ ಫೇಸ್​ಬುಕ್​ನಲ್ಲಿ ಪೋಸ್ಟ್ ಹಾಕಿದ್ದಾರೆ. ನಾನು ನಾಳೆ ಬಳ್ಳಾರಿಗೆ ಭೇಟಿ ನೀಡಬೇಕಿತ್ತು. ನಾಳೆ ನನ್ನ ಪ್ರಾಣ ಸ್ನೇಹಿತ, ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರ ತಾಯಿಯ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಇಂದು ನನಗೆ ಕರೊನಾ ಸೋಂಕು ಇರುವುದು ದೃಢಪಟ್ಟಿದ್ದರಿಂದ ಬಳ್ಳಾರಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಬರೆದಿದ್ದಾರೆ.

    ನನಗೆ ಕರೊನಾ ಸೋಂಕಿನ ಯಾವುದೇ ಲಕ್ಷಣಗಳು ಇಲ್ಲದಿದ್ದರೂ ರಿಪೋರ್ಟ್​ ಪಾಸಿಟಿವ್​ ಬಂದಿದೆ. ಉತ್ತಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ನಿಮ್ಮೆಲ್ಲರ ಆಶೀರ್ವಾದದಿಂದ ಆದಷ್ಟು ಶೀಘ್ರವೇ ಗುಣಮುಖನಾಗಿ ಮನೆಗೆ ಮರಳಲಿದ್ದೇನೆ ಎಂದು ಹೇಳಿದ್ದಾರೆ.

    ರೈಲ್ವೆ ಸ್ಟೇಶನ್​​ನಲ್ಲಿ ಡಿಆರ್​ಐ ಬಳಿ ಸಿಕ್ಕಿಬಿದ್ದ ಸ್ಮಗ್ಲರ್ಸ್​; 43 ಕೋಟಿ ರೂ.ಮೌಲ್ಯದ ಚಿನ್ನ ವಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts