ನವದೆಹಲಿ : ಮಾಜಿ ಕೇಂದ್ರ ಸಚಿವ ಮತ್ತು ಎರಡು ಬಾರಿ ಕಾಂಗ್ರೆಸ್ ಸಂಸದರಾಗಿರುವ ಜಿತಿನ್ ಪ್ರಸಾದ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮುಂದಿನ ವರ್ಷ ವಿಧಾನಸಭಾ ಚುನಾವಣೆಯನ್ನು ಎದುರಿಸಲಿರುವ ಉತ್ತರಪ್ರದೇಶದಲ್ಲಿ, ಇದು ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹೊಡೆತವಾಗಿದೆ.
ಬಿಜೆಪಿ ಮುಖಂಡ ಹಾಗೂ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ದೆಹಲಿ ನಿವಾಸಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿದ ಪ್ರಸಾದ, ಅಧಿಕೃತವಾಗಿ ಬಿಜೆಪಿ ಸೇರಿದರು. 2004 ರಲ್ಲಿ ಶಹಜಹಾನ್ಪುರ್ ಮತ್ತು 2009 ರಲ್ಲಿ ಢೌರಾಹ್ರ ಲೋಕಸಭಾ ಕ್ಷೇತ್ರಗಳಿಂದ ಗೆದ್ದು ಬಂದಿದ್ದ ಜಿತಿನ್ಪ್ರಸಾದ 2014 ರಲ್ಲಿ ಸೋಲನುಭವಿಸಿದ್ದರು.
ಇದನ್ನೂ ಓದಿ: ನಕ್ಕರಾ ಸಿಎಂ ಸಾಹೇಬ್ರು… ಬಿಗಿಮೋರೆಯ ಮೊಗದಲ್ಲಿ ಚೆಂದದ ನಗು ಹರಿಸಿದ ಮಹಿಳೆ…
ಕಾಂಗ್ರೆಸ್ ಪಕ್ಷದಲ್ಲಿ ಸಂಘಟನಾತ್ಮಕ ಬದಲಾವಣೆಗಳಾಗಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದ ಜಿ23 ಮುಖಂಡರಲ್ಲಿ ಜಿತಿನ್ ಪ್ರಸಾದ ಕೂಡ ಒಬ್ಬರಾಗಿದ್ದರು. (ಏಜೆನ್ಸೀಸ್)
ನೂತನ ಜಿಲ್ಲಾಧಿಕಾರಿ ಗೌತಮ್ ಬಗಾದಿ ಅಧಿಕಾರ ಹಸ್ತಾಂತರಕ್ಕೂ ಬಾರದ ರೋಹಿಣಿ ಸಿಂಧೂರಿ