More

    BJPಯಿಂದ ಜೆಡಿಎಸ್​ಗೆ ಮರಳಿದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ; ಪಕ್ಷಕ್ಕೆ ಬರಮಾಡಿಕೊಂಡ ಎಚ್​ಡಿಕೆ

    ಬೆಂಗಳೂರು: ಬಸವಕಲ್ಯಾಣ ಕ್ಷೇತ್ರದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷದ ಶಾಲು ಹಾಕುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್​ ಡಿ ಕುಮಾರಸ್ವಾಮಿ ಖೂಬಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

    ಇದನ್ನೂ ಓದಿ: 25ನೇ ಸಿನಿಮಾ ರಿಲೀಸ್ ಶುಭ ಸಂದರ್ಭದಲ್ಲಿ 1 ಕೋಟಿ ರೂ. ಬೆಲೆಬಾಳುವ ಕಾರಿಗೆ ಒಡೆಯನಾದ ಡಾಲಿ!

    ಬಸವಕಲ್ಯಾಣ ಕ್ಷೇತ್ರದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಜೆ.ಪಿ.ನಗರದಲ್ಲಿರುವ ಕುಮಾರಸ್ವಾಮಿ ಅವರ ನಿವಾಸದಲ್ಲಿ ಪಕ್ಷ ಸೇರ್ಪಡೆಗೊಂಡಿದ್ದಾರೆ.

    ಇದನ್ನೂ ಓದಿ:  ನಟ ಅಗೆದು ಉಗುಳಿದ ಚೂಯಿಂಗ್ ಗಮ್​ಗೆ ದುಬಾರಿ ಬೆಲೆ; 32 ಲಕ್ಷ ರೂ. ನಿಂದ ಹರಾಜು ಪ್ರಾರಂಭ!

    ಖೂಬಾ ಅವರು ಈ ಹಿಂದೆ ಕೂಡಾ ಜೆಡಿಎಸ್ ಪಕ್ಷದಲ್ಲಿಯೇ ಇದ್ದವರು. ಜೆಡಿಎಸ್ ಪಕ್ಷದಿಂದ ಬಸವ ಕಲ್ಯಾಣ ಕ್ಷೇತ್ರವನ್ನು ಎರಡು ಅವಧಿಗೆ ಪ್ರತಿನಿಧಿಸಿದ್ದರು. ಕಾರಣಾಂತರಗಳಿಂದ ಅವರು ಪಕ್ಷ ಬಿಟ್ಟಿದ್ದರು. ಕಳೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗಿದ್ದರು. 2018ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಕಾಂಗ್ರೆಸ್​​ ಅಭ್ಯರ್ಥಿ ಬಿ. ನಾರಾಯಣ ರಾವ್​ ವಿರುದ್ಧ ಸೋಲುಂಡಿದ್ದರು. 2019ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿದ್ದು, ಆದರೆ ಬಿಜೆಪಿ ಖೂಬಾ ಅವರಿಗೆ ಟಿಕೆಟ್​ ನೀಡದೆ ಶರಣು ಸಲಗಾರಗೆ ಟಿಕೆಟ್​ ನೀಡಲಾಗಿತ್ತು. ಇದರಿಂದ ಅವರು ಅಸಮಾಧಾನಗೊಂಡಿದ್ದರು. ಈಗ ಮರಳಿ ತಮ್ಮ ಮನೆಗೆ ವಾಪಸ್ ಆಗಿದ್ದಾರೆ.

    ಟೋಲ್ ದರ ಹೆಚ್ಚಳವಾಗಿದೆ..ಡಬಲ್ ಇಂಜಿನ್‌ ಸರ್ಕಾರದಲ್ಲಿ ಬಡವರಿಗೆ ರಸ್ತೆ ಇಲ್ಲ; ನಿಖಿಲ್ ಕುಮಾರಸ್ವಾಮಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts