ಬೆಂಗಳೂರು: ಬಸವಕಲ್ಯಾಣ ಕ್ಷೇತ್ರದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷದ ಶಾಲು ಹಾಕುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಖೂಬಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.
ಇದನ್ನೂ ಓದಿ: 25ನೇ ಸಿನಿಮಾ ರಿಲೀಸ್ ಶುಭ ಸಂದರ್ಭದಲ್ಲಿ 1 ಕೋಟಿ ರೂ. ಬೆಲೆಬಾಳುವ ಕಾರಿಗೆ ಒಡೆಯನಾದ ಡಾಲಿ!
ಬಸವಕಲ್ಯಾಣ ಕ್ಷೇತ್ರದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಜೆ.ಪಿ.ನಗರದಲ್ಲಿರುವ ಕುಮಾರಸ್ವಾಮಿ ಅವರ ನಿವಾಸದಲ್ಲಿ ಪಕ್ಷ ಸೇರ್ಪಡೆಗೊಂಡಿದ್ದಾರೆ.
ಇದನ್ನೂ ಓದಿ: ನಟ ಅಗೆದು ಉಗುಳಿದ ಚೂಯಿಂಗ್ ಗಮ್ಗೆ ದುಬಾರಿ ಬೆಲೆ; 32 ಲಕ್ಷ ರೂ. ನಿಂದ ಹರಾಜು ಪ್ರಾರಂಭ!
ಖೂಬಾ ಅವರು ಈ ಹಿಂದೆ ಕೂಡಾ ಜೆಡಿಎಸ್ ಪಕ್ಷದಲ್ಲಿಯೇ ಇದ್ದವರು. ಜೆಡಿಎಸ್ ಪಕ್ಷದಿಂದ ಬಸವ ಕಲ್ಯಾಣ ಕ್ಷೇತ್ರವನ್ನು ಎರಡು ಅವಧಿಗೆ ಪ್ರತಿನಿಧಿಸಿದ್ದರು. ಕಾರಣಾಂತರಗಳಿಂದ ಅವರು ಪಕ್ಷ ಬಿಟ್ಟಿದ್ದರು. ಕಳೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗಿದ್ದರು. 2018ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಕಾಂಗ್ರೆಸ್ ಅಭ್ಯರ್ಥಿ ಬಿ. ನಾರಾಯಣ ರಾವ್ ವಿರುದ್ಧ ಸೋಲುಂಡಿದ್ದರು. 2019ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಆದರೆ ಬಿಜೆಪಿ ಖೂಬಾ ಅವರಿಗೆ ಟಿಕೆಟ್ ನೀಡದೆ ಶರಣು ಸಲಗಾರಗೆ ಟಿಕೆಟ್ ನೀಡಲಾಗಿತ್ತು. ಇದರಿಂದ ಅವರು ಅಸಮಾಧಾನಗೊಂಡಿದ್ದರು. ಈಗ ಮರಳಿ ತಮ್ಮ ಮನೆಗೆ ವಾಪಸ್ ಆಗಿದ್ದಾರೆ.
ಟೋಲ್ ದರ ಹೆಚ್ಚಳವಾಗಿದೆ..ಡಬಲ್ ಇಂಜಿನ್ ಸರ್ಕಾರದಲ್ಲಿ ಬಡವರಿಗೆ ರಸ್ತೆ ಇಲ್ಲ; ನಿಖಿಲ್ ಕುಮಾರಸ್ವಾಮಿ