ಹೊಸಕೋಟೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊಟ್ಟ ಮಾತಿನಂತೆ ಸೋತ ನಮ್ಮನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ಮಂತ್ರಿ ಸ್ಥಾನ ನೀಡುತ್ತಾರೆ ಎನ್ನುವ ನಂಬಿಕೆ ಇದೆ ಎಂದು ಮಾಜಿ ಶಾಸಕ ಎಂಟಿಬಿ ನಾಗರಾಜ್ ಹೇಳಿದರು.
ಸಿಎಂ ಯಡಿಯೂರಪ್ಪ ಅವರ ಮೇಲೆ ನಮಗೆ ಅಪಾರ ನಂಬಿಕೆ ಇದೆ. ಕೊಟ್ಟ ಮಾತಿನಂತೆ ಯಾರಾದಾರೂ ನಡೆದರೆ ಅದು ಯಡಿಯೂರಪ್ಪ ಮಾತ್ರ. ಉಪ ಚುನಾವಣೆಯಲ್ಲಿ ಗೆದ್ದ 10 ಮಂದಿಗೆ ಹಾಗೂ ಬಿಜೆಪಿಯ ಮೂವರಿಗೆ ಮಂತ್ರಿಸ್ಥಾನ ಸಿಗಲಿದೆ. ಜೂನ್ ತಿಂಗಳಲ್ಲಿ ತೆರವಾಗುವ ವಿಧಾನಪರಿಷತ್ ಸ್ಥಾನಗಳಲ್ಲಿ ನಮಗೆ ಅವಕಾಶ ಮಾಡಿ ನಂತರ ಮಂತ್ರಿ ಮಾಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ನನಗೆ ಮಂತ್ರಿ ಸ್ಥಾನ ಸಿಗುತ್ತಿಲ್ಲ ಎಂಬ ಬೇಜಾರು ಇಲ್ಲ ಎಂದು ಹೇಳಿದರು. (ದಿಗ್ವಿಜಯ ನ್ಯೂಸ್)