ನವದೆಹಲಿ : ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಸುಲಿಗೆಯ ರಾಕೆಟ್ ನಡೆಸುತ್ತಿರುವ ಗಂಭೀರ ಆರೋಪ ಮಾಡಿದ್ದ ಮಾಜಿ ಮುಂಬೈ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್, ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಹೋಮ್ ಗಾರ್ಡ್ಸ್ ಇಲಾಖೆಗೆ ತಮ್ಮನ್ನು ವರ್ಗಾವಣೆ ಮಾಡಿರುವ ಸರ್ಕಾರಿ ಆದೇಶವನ್ನು ಪ್ರಶ್ನಿಸುವುದರೊಂದಿಗೆ ದೇಶ್ಮುಖ್ರ ‘ವಿವಿಧ ಭ್ರಷ್ಟಾಚಾರ’ದ ಬಗ್ಗೆ ಸಿಬಿಐ ತನಿಖೆ ಕೋರಿದ್ದಾರೆ.
ಕಳೆದ ವಾರ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಗೃಹ ಮಂತ್ರಿ ದೇಶ್ಮುಖ್ ಬಗ್ಗೆ ಪತ್ರ ಬರೆದಿದ್ದ ಸಿಂಗ್, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದರು. ಪತ್ರದಲ್ಲಿ, ದೇಶ್ಮುಖ್ ಅವರು ಹಲವು ಪೊಲೀಸ್ ಅಧಿಕಾರಿಗಳೊಂದಿಗೆ ಪಬ್ ಮತ್ತು ರೆಸ್ಟೊರೆಂಟ್ಗಳಿಂದ ಹಣ ಸುಲಿಗೆ ಮಾಡುವ ದಂಧೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದರು.
ಇದನ್ನೂ ಓದಿ: ಭಾರತೀಯರಿಗೆ ಸ್ಪೆಷಲ್ ಆಗಿ ಬರ್ತಿದೆ ಸ್ಕೋಡಾ ‘ಕುಶಾಕ್’; ಇದರ ಸ್ಪೆಷಾಲಿಟಿ ಏನೆಂದು ತಿಳಿದುಕೊಳ್ಳಿ
ಇದೀಗ ಸುಪ್ರೀಂ ಕೋರ್ಟ್ನಲ್ಲಿ ತಮ್ಮನ್ನು ಮುಂಬೈ ಕಮಿಷನರ್ ಹುದ್ದೆಯಿಂದ ವರ್ಗಾಯಿಸಿ ಹೋಂ ಗಾರ್ಡ್ಸ್ ಮುಖ್ಯಸ್ಥನನ್ನಾಗಿ ಮಾಡಿರುವ ರಾಜ್ಯ ಸರ್ಕಾರದ ಆದೇಶವನ್ನು ಪರಮ್ ಬೀರ್ ಸಿಂಗ್ ಪ್ರಶ್ನಿಸಿದ್ದಾರೆ. ಜೊತೆಗೇ ದೇಶ್ಮುಖ್ ಅವರ ಮೇಲಿರುವ ಭ್ರಷ್ಟಾಚಾರದ ಆರೋಪಗಳ ನಿಷ್ಕಕ್ಷಪಾತವಾದ ತನಿಖೆಗೆ ಆದೇಶಿಸಬೇಕೆಂದು ಕೋರಿದ್ದಾರೆ. (ಏಜೆನ್ಸೀಸ್)
ಆಟದ ನಡುವೆ ಪೆಟ್ಟಿಗೆ ಒಳಕ್ಕೆ ಜಿಗಿದ ಮುಗ್ಧ ಮಕ್ಕಳು… ಅಲ್ಲಿ ಕಾಯುತ್ತಿದ್ದ ಜವರಾಯ !