ಬೆಂಗಳೂರು: ಫೇಸ್ಬುಕ್ನಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಕುಟುಂಬದವರ ಬಗ್ಗೆ ಅಶ್ಲೀಲವಾಗಿ ಸಂದೇಶ, ಚಿತ್ರ ಅಪ್ಲೋಡ್ ಮಾಡುವರ ವಿರುದ್ಧ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಜೆಡಿಎಸ್ ಯುವ ಘಟಕ ಮುಖಂಡ ಶಂಕರೇಗೌಡ ದೂರು ನೀಡಿದ್ದಾರೆ. ಈ ಮೇರೆಗೆ ಅಪರಿಚಿತ ವ್ಯಕ್ತಿ ವಿರುದ್ಧ ಎ್ಐಆರ್ ದಾಖಲಿಸಿ ೇಸ್ಬುಕ್ ಖಾತೆ ತೆರೆದವರ ಪತ್ತೆಗೆ ತಾಂತ್ರಿಕ ತಜ್ಞರ ಮೊರೆ ಹೋಗಿರುವುದಾಗಿ ಪಶ್ಚಿಮ ಸಿಇಎನ್ ಠಾಣೆ ಪೊಲೀಸರು ತಿಳಿಸಿದ್ದಾರೆ.
ಕರಿಇಡ್ಲಿ ಕುಮಾರ ಎಂಬ ಹೆಸರಿನಲ್ಲಿ ೇಸ್ಬುಕ್ನಲ್ಲಿ ಖಾತೆ ತೆರೆದು ಜೆಡಿಎಸ್ ಮುಖಂಡರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ.ರೇವಣ್ಣ, ಪ್ರಜ್ವಲ್ ರೇವಣ್ಣ, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಹಲವರ ಬಗ್ಗೆ ಅಶ್ಲೀಲವಾಗಿ ಕಾಮೆಂಟ್ ಮಾಡಿದ್ದಾರೆ.
ಅವಾಚ್ಯ ಶಬ್ದಗಳಿಂದ ನಿಂದಿಸಿ ಪಕ್ಷದ ಮಹಿಳಾ ಕಾರ್ಯಕರ್ತರ ಬಗ್ಗೆಯೂ ಅಸಭ್ಯವಾಗಿ ಹೇಳಿಕೆ ಅಪ್ಲೋಡ್ ಮಾಡಿದ್ದಾರೆ. ಈ ಕಿಡಿಗೇಡಿಗಳ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಶಂಕರೇಗೌಡ ದೂರಿನಲ್ಲಿ ಮನವಿ ಮಾಡಿದ್ದಾರೆ.