More

    ದೇಶದಲ್ಲಿ ರೈಲು ಸಂಚಾರ ಆರಂಭಕ್ಕೆ ನಾಲ್ವರು ಸಿಎಂಗಳ ವಿರೋಧ

    ನವದೆಹಲಿ: ನವದೆಹಲಿಯಿಂದ ವಿವಿಧ ಸ್ಥಳಗಳಿಗೆ ಮಂಗಳವಾರದಿಂದ 15 ಜೋಡಿ ರೈಲು ಸಂಚಾರ ಆರಂಭಿಸಲು ಕೇಂದ್ರ ಸರ್ಕಾರ ಕೈಗೊಂಡಿರುವ ನಿರ್ಧಾರಕ್ಕೆ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಜತೆಗಿನ ವಿಡಿಯೋ ಸಂವಾದದಲ್ಲಿ ತೆಲಂಗಾಣದ ಸಿಎಂ ಕೆ. ಚಂದ್ರಶೇಖರ್​ ರಾವ್​ ಮೊದಲಿಗೆ ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ತಮಿಳುನಾಡು ಸಿಎಂ ಪಳನಿಸ್ವಾಮಿ, ಆಂಧ್ರಪ್ರದೇಶ ಸಿಎಂ ಜಗನ್​ ಮೋಹನ್​ ರೆಡ್ಡಿ ಮತ್ತು ಛತ್ತೀಗಢದ ಸಿಎಂ ಭೂಪೇಶ್​ ಬಘೇಲ್​ ಧ್ವನಿಗೂಡಿಸಿದರು.

    ಕರೊನಾ ಸೋಂಕಿಗೆ ಒಳಗಾಗಿರುವವರು ಯಾರು ಎಂಬುದನ್ನು ನಿಖರವಾಗಿ ಗುರುತಿಸಿ, ಪರೀಕ್ಷೆಗೆ ಒಳಪಡಿಸಿ, ಕ್ವಾರಂಟೈನ್​ಗೆ ಕಳುಹಿಸಲು ಕಷ್ಟವಾಗುತ್ತದೆ. ಆದ್ದರಿಂದ, ರೈಲು ಸಂಚಾರ ಪುನರಾರಂಭಿಸುವುದರಿಂದ ಕರೊನಾ ಪಿಡುಗು ನಿಯಂತ್ರಣಕ್ಕೆ ತುಂಬಾ ತೊಂದರೆಯಾಗುತ್ತದೆ ಎಂದು ಕೆ.ಸಿ. ಚಂದ್ರಶೇಖರ್​ ರಾವ್​ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts