More

    ಜಿಲ್ಲೆಯ ನಾಲ್ಕು ಕಡೆ ಭತ್ತ ಖರೀದಿ ಕೇಂದ್ರ  -ಸಿದ್ಧತೆಗೆ ಜಿಲ್ಲಾಧಿಕಾರಿ ವೆಂಕಟೇಶ್ ಸೂಚನೆ 

    ದಾವಣಗೆರೆ: ಸರ್ಕಾರ ಭತ್ತಕ್ಕೆ ನಿಗದಿಪಡಿಸಿರುವ ಬೆಂಬಲ ಬೆಲೆ ಕುರಿತು ರೈತರಿಗೆ ಜಾಗೃತಿ ಮೂಡಿಸಬೇಕು. ಜಿಲ್ಲೆಯ ಭತ್ತ ಖರೀದಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.
    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಭತ್ತದ ಬೆಂಬಲ ಬೆಲೆ ಖಾತ್ರಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ಸಾಮಾನ್ಯ ಭತ್ತಕ್ಕೆ 2183 ರೂ., ಎ ಗ್ರೇಡ್ ಭತ್ತಕ್ಕೆ 2203 ರೂ., ರಾಗಿಗೆ 3846 ರೂ. ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಜಿಲ್ಲೆಯ ಭತ್ತವನ್ನು ಖರೀದಿ ಮಾಡಲಾಗುವುದು. ಖರೀದಿ ಕೇಂದ್ರಗಳಲ್ಲಿ ತಾಂತ್ರಿಕ ದೋಷಗಳನ್ನು ಪರಿಹರಿಸಬೇಕು ಎಂದರು.
    ದಾವಣಗೆರೆ, ಹರಿಹರ, ಹೊನ್ನಾಳಿ ಮತ್ತು ಚನ್ನಗಿರಿಯಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, 10 ರಿಂದ 15 ಸಾವಿರ ಕ್ವಿಂಟಾಲ್ ಖರೀದಿಗೆ ಅವಕಾಶವಿದೆ. ಒಬ್ಬ ರೈತರಿಂದ 25 ರಿಂದ 40 ಕ್ವಿಂಟಾಲ್ ವರೆಗೆ ಭತ್ತ ಖರೀದಿಸಲಾಗುವುದು. ನ.15 ರಿಂದ ಡಿ.23 ರ ವರೆಗೆ ನೋಂದಣಿ ನಡೆಯಲಿದೆ ಎಂದರು.
    ಜಿಲ್ಲೆಯಲ್ಲಿ 51 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬಿತ್ತನೆಯಾಗಿದೆ. ಭದ್ರಾ ಅಚ್ಚುಕಟ್ಟು ಪ್ರದೇಶಗಳಿಗೆ ಆನ್ ಆ್ಯಂಡ್ ಆಫ್ ಪದ್ಧತಿಯಡಿ ನಾಲೆಗಳಿಗೆ ನೀರು ಹರಿಸುತ್ತಿರುವುದರಿಂದ ಉತ್ತಮ ಇಳುವರಿ ನಿರೀಕ್ಷೆ ಇದೆ ಎಂದರು.
    ರೈತರ ಬೆಳೆಗಳಿಗೆ ಮಾರುಕಟ್ಟೆ ಸ್ಥಿರತೆ ಒದಗಿಸುವ ನಿಟ್ಟಿನಲ್ಲಿ ಹಾಗೂ ಮಾರುಕಟ್ಟೆ ಕುರಿತು ಅವರಲ್ಲಿ ಅರಿವು ಮೂಡಿಸುವಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆ ಅನುಷ್ಠಾನ ನೆರವಾಗುತ್ತದೆ. ಈ ಬಗ್ಗೆ ಜಿಲ್ಲೆಯಿಂದ ಪ್ರಸ್ತಾವನೆ ಸಲ್ಲಿಸಲಾಗುವುದು. ಖರೀದಿ ಕೇಂದ್ರ ತೆರೆಯಲು ಅವಶ್ಯಕ ಸಿದ್ಧ್ದತೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
    ಎಪಿಎಂಸಿ ಅಧಿಕಾರಿಗಳು ಖರೀದಿ ಕೇಂದ್ರಗಳಿಗೆ ಕಂಪ್ಯೂಟರ್, ಪೀಠೋಪಕರಣಗಳು, ಸಿಸಿ ಕ್ಯಾಮರಾ ಜತೆಗೆ ರೈತರಿಂದ ಭತ್ತ-ರಾಗಿ ಖರೀದಿಸುವಾಗ ವಿಡಿಯೋ ಚಿತ್ರೀಕರಣ ವ್ಯವಸ್ಥೆ ಮಾಡಬೇಕು. ರಾಗಿಗೆ ಬೆಂಬಲ ಬೆಲೆ ಹೆಚ್ಚಾಗಿರುವುದರಿಂದ ಹೆಚ್ಚು ರಾಗಿ ಬೆಳೆಯಲು ಉತ್ತೇಜಿಸಬೇಕು. ವ ಕಾರಣ ರೈತರಲ್ಲಿ ಹೆಚ್ಚು ರಾಗಿ ಬೆಳೆಯಲು ಪ್ರೆೀತ್ಸಾಹಿಸಬೇಕು.
    ರೈತರಿಂದ ಖರೀದಿಸಿದ ಭತ್ತವನ್ನು ಸಾರವರ್ಧಿತ ಅಕ್ಕಿ ತಯಾರಿಸುವ ಯಂತ್ರವನ್ನು ಅಳವಡಿಸುವ ಅಕ್ಕಿ ಗಿರಣಿಗಳಿಗೆ ಹಲ್ಲಿಂಗ್ ಮಾಡಲು ನೀಡಲಾಗುತ್ತದೆ ಎಂದರು.
    ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಸಿದ್ರಾಮ ಮಾರಿಹಾಳ್, ಎಪಿಎಂಸಿ ಸಹಾಯಕ ನಿರ್ದೇಶಕ ಗಣೇಶ್, ಎಪಿಎಂಸಿ ಕಾರ್ಯದರ್ಶಿ ಗಿರೀಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts