More

    ಲಾರಿಗಳ ನಡುವೆ ಡಿಕ್ಕಿ; ನಾಲ್ವರು ಮೃತ್ಯು, ಇಬ್ಬರ ಸ್ಥಿತಿ ಗಂಭೀರ

    ಮುಂಬೈ: ಎರಡು ಲಾರಿಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿರುವ ಬೆಂಗಳೂರು-ಮುಂಬೈ ಹೆದ್ದಾರಿಯ ನಾವಲೆ ಸೇತುವೆ ಬಳಿ ನಡೆದಿದೆ.

    ಡಿಕ್ಇ ಹೊಡೆದ ರಭಸಕ್ಕೆ ಎರಡು ಲಾರಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೂರು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಓರ್ವ ಗಾಯಾಳು ಮೃತಪಟ್ಟಿದ್ದಾರೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

    ಇದನ್ನೂ ಓದಿ: ಯುದ್ಧಪೀಡಿತ ಇಸ್ರೇಲ್​ಗೆ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಭೇಟಿ

    ಈ ಕುರಿತು ಪ್ರತಿಕ್ರಿಯಿಸಿರುವ ಸಿನ್ಹಗಢ್​ ರಸ್ತೆಯ ಪೊಲೀಸ್​ ಠಾಣಾಧಿಕಾರಿ ಅಭಯ್​ ಮಹಾಜನ್, ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ತಡರಾತ್ರಿ ಲಾರಿ ಹಾಗೂ ಕಂಟೈನರ್​ ನಡುವೆ ಅಪಘಾತ ಸಂಭವಿಸಿದೆ. ಕಂಟೈನರ್​ ಟ್ರಕ್​ನ ಬ್ರೇಕ್​ ವೈಫಲ್ಯಗೊಂಡ ಪರಿಣಾಮ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಎರಡು ಲಾರಿಗಳಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಸಂಪೂರ್ಣವಾಗಿ ಹೊತ್ತಿ ಉರಿದಿದೆ.

    ವಿಚಾರ ತಿಳಿದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಎರಡು ಟ್ರಕ್​ನಲ್ಲಿದ್ದ ಆರು ಮಂದಿ ಪೈಕಿ ನಾಲ್ವರು ಮತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಸಿನ್ಹಗಢ್​ ರಸ್ತೆಯ ಪೊಲೀಸ್​ ಠಾಣಾಧಿಕಾರಿ ಅಭಯ್​ ಮಹಾಜನ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts