ಜೀಪ್​-ಲಾರಿ ನಡುವೆ ಭೀಕರ ಅಪಘಾತ; ನಾಲ್ವರು ಮೃತ್ಯು

ಕಲಬುರಗಿ: ಜೀಪ್​ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆ ಅಫಜಲ್​ಪುರ ತಾಲ್ಲೂಕಿನ ಹೊರವಲಯದ ನೀರಾವರಿ ಕಚೇರಿ ಬಳಿ ತಡರಾತ್ರಿ ನಡೆದಿದೆ. ಕಲಬುರಗಿ ಕಡೆಯಿಂದ ಹೊರಟಿದ್ದ ಲಾರಿಗೆ ಜೀಪ್​ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಸಂತೋಷ್ (40), ಶಂಕರ್ (55), ಸಿದ್ದಮ್ಮ (50), ಹುಚ್ಚಪ್ಪ (5) ಮೃತ ದುರ್ದೈವಿಗಳೆಂದು ತಿಳಿದು ಬಂದಿದೆ. ಮೃತರು ಅಫಜಲ್​ಪುರ ತಾಲ್ಲೂಕಿನ ಮಾಡ್ಯಾಳ ಗ್ರಾಮದ ನಿವಾಸಿಗಳಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಪೂಜಾ ದೊಡ್ಡಮನಿ (30)ಯನ್ನು … Continue reading ಜೀಪ್​-ಲಾರಿ ನಡುವೆ ಭೀಕರ ಅಪಘಾತ; ನಾಲ್ವರು ಮೃತ್ಯು