ಹಾಸನ: ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾಗಿ ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಸಾವಿಗೀಡಾಗಿರುವ ದಾರುಣ ಘಟನೆ ಚನ್ನರಾಯಪಟ್ಟಣದ ನುಗ್ಗೆಹಳ್ಳಿ ಬಳಿಯ ಕಾರೆಹಳ್ಳಿಯಲ್ಲಿ ಶನಿವಾರ (ಫೆ.25) ತಡರಾತ್ರಿ ನಡೆದಿದೆ.
ಮೃತ ದಂಪತಿಯನ್ನು ಲೋಕೇಶ್ ಆಚಾರಿ ಮತ್ತು ಲಕ್ಷ್ಮೀ ಎಂದು ಗುರುತಿಸಲಾಗಿದೆ. ಅವರ ಇಬ್ಬರು ಮಕ್ಕಳು ಕೂಡ ಅಸುನೀಗಿದ್ದಾರೆ. ಕಾರೇಹಳ್ಳಿ-ತಿಪಟೂರು ಮಾರ್ಗದಲ್ಲಿ ರಸ್ತೆಬದಿ ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಇದನ್ನೂ ಓದಿ: ಪಾಕಿಸ್ತಾನದ ಮೊದಲ ತೃತೀಯ ಲಿಂಗಿ ಆ್ಯಂಕರ್ ಮೇಲೆ ಗುಂಡಿನ ದಾಳಿ; ಪ್ರಾಣಾಪಾಯದಿಂದ ಪಾರು
ಲೋಕೇಶ್ ಆಚಾರಿ ತನ್ನ ಪತ್ನಿ ಮತ್ತು ಮಕ್ಕಳನ್ನು ಹೊಸೂರು ಗ್ರಾಮದಿಂದ ಕರೆದುಕೊಂಡು ನವಿಲೆ ಗ್ರಾಮಕ್ಕೆ ತೆರಳುವಾಗ ಮಾರ್ಗ ಮಧ್ಯೆ ಈ ದುರ್ಘಟನೆ ಸಂಭವಿಸಿದೆ.
ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ನುಗ್ಗೆಹಳ್ಳಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹಗಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರ ಮಾಡಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ವರ್ಗಾಯಿಸಲಾಗುತ್ತದೆ. (ದಿಗ್ವಿಜಯ ನ್ಯೂಸ್)
ಕಳೆದು ಹೋದ ವ್ಯಾಲೆಟ್ ಮರಳಿಸಿದ ಭಾರತೀಯ ಯುವಕನ ಪ್ರಾಮಾಣಿಕತೆ ಕಂಡು ಭಾವುಕಳಾದ ವಿದೇಶಿ ಮಹಿಳೆ
ಪುರುಷರು-ಮಹಿಳೆಯರು ಇಬ್ಬರಲ್ಲಿ ಯಾರು ಹೆಚ್ಚು ಮೋಸ ಮಾಡ್ತಾರೆ? ಯುವಕ ಕೊಟ್ಟ ಉತ್ತರ ಸಿಕ್ಕಾಪಟ್ಟೆ ವೈರಲ್
ಕೆಸಿಸಿಗೆ ಸುರೇಶ್ ರೈನಾ ಫಿದಾ: ಟ್ರೋಫಿ ಗೆಲುವಿನ ಬಳಿಕ ಕಿಚ್ಚನಿಗೆ ಧನ್ಯವಾದ ತಿಳಿಸಿದ ರೈನಾ